ದೇಶ

ಕೇರಳ ಪ್ರವಾಹ: ಮೃತರ ಸಂಖ್ಯೆ 72ಕ್ಕೆ ಏರಿಕೆ, 50 ಜನರ ಕಣ್ಮರೆ, ಪರಿಹಾರ ನಿಧಿ ದುರ್ಬಳಕೆಯಾಗಿಲ್ಲ- ಮುಖ್ಯಮಂತ್ರಿ

ಕಳೆದ ನಾಲ್ಕು ದಿನಗಳಿಂದಲೂ ಕೇರಳದಲ್ಲಿ ತೀವ್ರವಾಗಿ ಸುರಿಯುತ್ತಿರುವ ಮಳೆ ಹಾಗೂ ಭೂ ಕುಸಿತದಿಂದಾಗಿ ಮೃತಪಟ್ಟರ ಸಂಖ್ಯೆ 72ಕ್ಕೆ ಏರಿಕೆ ಆಗಿದೆ. 50 ಜನರು ಕಣ್ಮರೆಯಾಗಿದ್ದಾರೆ.

`ಕೊಚ್ಚಿ: ಕಳೆದ ನಾಲ್ಕು ದಿನಗಳಿಂದಲೂ ಕೇರಳದಲ್ಲಿ ತೀವ್ರವಾಗಿ ಸುರಿಯುತ್ತಿರುವ ಮಳೆ ಹಾಗೂ ಭೂ ಕುಸಿತದಿಂದಾಗಿ ಮೃತಪಟ್ಟರ ಸಂಖ್ಯೆ 72ಕ್ಕೆ ಏರಿಕೆ ಆಗಿದೆ. 50 ಜನರು ಕಣ್ಮರೆಯಾಗಿದ್ದಾರೆ.

ಮುಂದಿನ ದಿನಗಳಲ್ಲಿ ಮಳೆ ಸ್ವಲ್ಪ ಕಡಿಮೆಯಾಗಬಹುದೆಂದು ಕೇರಳ ವಿಕೋಪ ನಿರ್ವಹಣಾ ಪ್ರಾಧಿಕಾರಿ ಮುನ್ಸೂಚನೆ ನೀಡಿದ್ದು, ಕಾಸರಗೋಡು, ಕಣ್ಣೂರು, ವೈನಾಡು, ಮಲ್ಲಾಪುರಂ, ಕೋಝಿಕೋಡು ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಇಂದು ಆರೆಂಜ್ ಆಲರ್ಟ್ ಘೋಷಿಸಲಾಗಿದೆ. 

ಕೊಚ್ಚಿ ವಿಮಾನ ನಿಲ್ದಾಣವನ್ನು ಗುರುವಾರ ಸಂಜೆಯಿಂದಲೂ ಮುಚ್ಚಲಾಗಿದೆ. ಬಹುತೇಕ ರಸ್ತೆ ಹಾಗೂ ರೈಲು ಸಂಚಾರ ಭಾನುವಾರದಿಂದ ಆರಂಭವಾಯಿತು.

ಆದಾಗ್ಯೂ, ಮಳೆಯಿಂದಾಗಿ ನೂರಾರು ಜನರು ಮನೆ ಕಳೆದುಕೊಂಡಿದ್ದಾರೆ. ರಾಜ್ಯಾದ್ಯಂಕ 1639 ಪರಿಹಾರ ಕೇಂದ್ರಗಳಲ್ಲಿ ಸುಮಾರು 2.5 ಲಕ್ಷ ಜನರು ಆಶ್ರಯ ಪಡೆದುಕೊಂಡಿದ್ದಾರೆ. ಈ ಮಧ್ಯೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಲ್ಲಿ ದುರ್ಬಳಕೆಯಾಗಿದೆ ಎಂಬ ವರದಿಗಳನ್ನು ನಂಬಬಾರದು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಹೇಳಿದ್ದಾರೆ.

ಕೇರಳದಲ್ಲಿ ನೆರೆಯಿಂದಾಗಿ ಸುಮಾರು 3 ಸಾವಿರ ಮನೆಗಳಿಗೆ ಹಾನಿಯಾಗಿದೆ. 72 ಜನರು ಸಾವನ್ನಪ್ಪಿದ್ದು, 58 ಜನ ಕಣ್ಣರೆಯಾಗಿದ್ದಾರೆ. 32 ಮಂದಿ ಗಾಯಗೊಂಡಿದ್ದಾರೆ ಕಾಂಗ್ರೆಸ್ ಮುಖಂಡ ಶಶಿ ತರೂರು ಟ್ವೀಟ್ ಮಾಡಿದ್ದಾರೆ.


 ವೈನಾಡಿನ ಮೆಪ್ಪಾಡಿಯಲ್ಲಿ ನೂರು ಎಕರೆ ಟೀ ತೋಟ, ಮಸೀದಿ, ದೇವಸ್ಥಾನಗಳು, ಗುರುವಾರ ಸಂಭವಿಸಿದ ಭೂಕುಸಿತದಲ್ಲಿ ನೆಲಕಚ್ಚಿವೆ. ನಿನ್ನೆ ದಿನ ಮೃತದೇಹವೊಂದು ಸಿಕ್ಕಿದ್ದು, ಇನ್ನೂ ಎಂಟು ಮಂದಿ ಕಣ್ಮರೆಯಾಗಿದ್ದಾರೆ.75 ಜನರನ್ನು ರಕ್ಷಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT