ದೇಶ

ದೇಶಾದ್ಯಂತ ಮುಸ್ಲಿಂ ಬಾಂಧವರಿಂದ ಈದ್ ಆಚರಣೆ; ರಾಷ್ಟ್ರಪತಿ, ಪ್ರಧಾನಿ ಶುಭಾಶಯ

ಮುಸಲ್ಮಾನರ ಪವಿತ್ರ ಹಬ್ಬ ತ್ಯಾಗ ಮತ್ತು ಬಲಿದಾನದ ಪ್ರತೀಕವಾದ ಬಕ್ರೀದ್ ನ್ನು ದೇಶಾದ್ಯಂತ ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯಿಂದ ಸೋಮವಾರ ಬೆಳಗ್ಗೆಯಿಂದಲೇ ಆಚರಣೆ ಮಾಡುತ್ತಿದ್ದಾರೆ. 

ನವದೆಹಲಿ: ಮುಸಲ್ಮಾನರ ಪವಿತ್ರ ಹಬ್ಬ ತ್ಯಾಗ ಮತ್ತು ಬಲಿದಾನದ ಪ್ರತೀಕವಾದ ಬಕ್ರೀದ್ ನ್ನು ದೇಶಾದ್ಯಂತ ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯಿಂದ ಸೋಮವಾರ ಬೆಳಗ್ಗೆಯಿಂದಲೇ ಆಚರಣೆ ಮಾಡುತ್ತಿದ್ದಾರೆ.


ಸಾರ್ವಜನಿಕ ಮೈದಾನಗಳಲ್ಲಿ ಸೇರಿ ಮಳೆ, ಗಾಳಿ, ಚಳಿಯನ್ನು ಲೆಕ್ಕಿಸದೆ ಶ್ರದ್ಧೆಯಿಂದ ವಿಶೇಷ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರ ದಾಳಿ ಆತಂಕದ ನಡುವೆಯೇ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸುತ್ತಿದ್ದು, ಸೇನಾಪಡೆಗಳ ರಕ್ಷಣೆ ನಡುವೆ ಶ್ರೀನಗರದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. 


ದೆಹಲಿಯಲ್ಲಿ ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಕಶ್ಮೆರೆ ಗೇಟ್ ನಲ್ಲಿರುವ ಪಂಜಾ ಶರೀಫ್ ದರ್ಗಾದಲ್ಲಿ ಸಾರ್ವಜನಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದರು.ದೆಹಲಿಯ ಜಮಾ ಮಸೀದಿಯಲ್ಲಿ ಜನರು ನಮಾಜ್ ನಲ್ಲಿ ಸಹೋದರ ಭಾತೃತ್ವದಿಂದ ಪಾಲ್ಗೊಂಡಿದ್ದರು.ಮಧ್ಯ ಪ್ರದೇಶದ ಭೋಪಾಲ್ ನಲ್ಲಿ ಈದ್ಗಾ ಮಸೀದಿಯಲ್ಲಿ ಸಾರ್ವಜನಿಕ ಪ್ರಾರ್ಥನೆಯಲ್ಲಿ ಜನರು ಭಾಗವಹಿಸಿದ್ದರು.
ಮುಂಬೈಯ ಹಮಿದಿಯಾ ಮಸೀದಿ ಹೊರಗೆ ಜನರು ನಮಾಜ್ ನಲ್ಲಿ ಭಾಗವಹಿಸಿದ್ದು ಕಂಡುಬಂತು. 


ದೇಶದ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಪ್ರಯುಕ್ತ ಶುಭಾಶಯ ತಿಳಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್, ದೇಶವಾಸಿಗಳಿಗೆ ಈದ್ ಹಬ್ಬದ ಶುಭಾಶಯಗಳು, ಈದ್ ನ ಜುಹಾ ಪ್ರೀತಿ, ಭ್ರಾತೃತ್ವ ಮತ್ತು ಮಾನವೀಯತೆಯ ಸೇವೆಯನ್ನು ಸಂಕೇತಿಸುತ್ತದೆ. ನಮ್ಮ ಸಂಯೋಜಿತ ಸಂಸ್ಕೃತಿಯನ್ನು ಪ್ರತಿನಿಧಿಸುವ ಈ ಸಾರ್ವತ್ರಿಕ ಮೌಲ್ಯಗಳಿಗೆ ನಾವು ಬದ್ಧರಾಗೋಣ ಎಂದು ಸಂದೇಶ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!

Onion Price: ದಿಢೀರ್ ಈರುಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ, ದರ ಏರಿಕೆಗೆ ಕಾರಣವೇನು?

ಮಹಿಳಾ ಮೀಸಲಾತಿ ಮಸೂದೆ ಬೆಂಬಲಿಸಿ, ಕಾಂಗ್ರೆಸ್ ಕಚೇರಿಯಲ್ಲಿ ವಂದೇ ಪೂರ್ತಿಯಾಗಿ ಹಾಡಿ ತೋರಿಸಿ: ರಾಹುಲ್ ಗಾಂಧಿಗೆ ಸ್ಮೃತಿ ಇರಾನಿ ಸವಾಲು

ಮದ್ಯ ಸಾಗಣೆ ಹಗರಣ: ಆಂಧ್ರಪ್ರದೇಶದ ಮಾಜಿ ಸಚಿವರ ಬಂಧಿಸಿದ ED

'3 ರಾಷ್ಟ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದೇನೆ': SIR ಪಟ್ಟಿಯಲ್ಲಿ ಹೆಸರು ನಾಪತ್ತೆ ಬಗ್ಗೆ ಮಾಜಿ ರಾಯಭಾರಿ ಅಸಮಾಧಾನ!