ದೇಶ

370ನೇ ವಿಧಿ ರದ್ದು: ವಾಘಾ ಗಡಿಯಲ್ಲಿ ಬಿಎಸ್ ಎಫ್ , ಪಾಕ್ ರೆಂಜರ್ಸ್ ನಡುವೆ ಸಿಹಿ ವಿನಿಮಯ ಇಲ್ಲ

ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನ ಕಲ್ಪಿಸುತ್ತಿದ್ದ 370ನೇ ವಿಧಿ ರದ್ದುಗೊಂಡ ನಂತರ ಭಾರತ ಹಾಗೂ ಪಾಕಿಸ್ತಾನ ನಡುವಣ ಸಂಬಂಧ ಮತ್ತಷ್ಟು ಹದಗೆಟ್ಟಿದ್ದು, ಅಠಾರಿ- ವಾಘಾ ಗಡಿಯಲ್ಲಿ ಈದ್ ಹಬ್ಬದ ಪ್ರಯುಕ್ತ  ಬಿಎಸ್ಎಫ್ ಹಾಗೂ ಪಾಕಿಸ್ತಾನದ ರೇಂಜರ್ಸ್ ಗಳ ನಡುವೆ  ಸಿಹಿ ವಿನಿಮಯ ನಡೆದಿಲ್ಲ.

ನವದೆಹಲಿ: ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನ ಕಲ್ಪಿಸುತ್ತಿದ್ದ 370ನೇ ವಿಧಿ ರದ್ದುಗೊಂಡ ನಂತರ ಭಾರತ ಹಾಗೂ ಪಾಕಿಸ್ತಾನ ನಡುವಣ ಸಂಬಂಧ ಮತ್ತಷ್ಟು ಹದಗೆಟ್ಟಿದ್ದು, ಅಠಾರಿ- ವಾಘಾ ಗಡಿಯಲ್ಲಿ ಈದ್ ಹಬ್ಬದ ಪ್ರಯುಕ್ತ  ಬಿಎಸ್ಎಫ್ ಹಾಗೂ ಪಾಕಿಸ್ತಾನದ ರೇಂಜರ್ಸ್ ಗಳ ನಡುವೆ  ಸಿಹಿ ವಿನಿಮಯ ನಡೆದಿಲ್ಲ.

ಪಾಕಿಸ್ತಾನದ ರೇಂಜರ್ಸ್ ಗಳಿಗೆ ಸಿಹಿ ಕೊಡಲು ಬಿಎಸ್ ಎಫ್ ಬಯಸಿದ್ದರೂ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂಬುದು ಮೂಲಗಳಿಂದ ತಿಳಿದುಬಂದಿದೆ.

ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ, ದೀಪಾವಳಿ, ಈದ್ ಹಬ್ಬಗಳಲ್ಲಿ ಬಿಎಸ್ ಎಫ್ ಹಾಗೂ ಪಾಕಿಸ್ತಾನದ ರೆಂಜರ್ಸ್ ಗಳ ನಡುವೆ ಕೊಡುಗೆಗಳನ್ನು ನೀಡಿ  ಸಿಹಿ ವಿನಿಮಯ ಮಾಡಿಕೊಳ್ಳುವ ಸಂಪ್ರದಾಯ ಹಿಂದಿನಿಂದಲೂ ನಡೆದುಕೊಂಡು ಬಂದಿತ್ತು.

 ಆದರೆ, ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ ಉಭಯ ದೇಶಗಳ ನಡುವಿನ ರಾಯಬಾರಿ ಸಂಬಂಧ ಹದಗೆಟ್ಟಿತ್ತು.ಭಾರತದೊಂದಿಗೆ ವ್ಯಾಪಾರ ಸಂಪರ್ಕವನ್ನು ಪಾಕಿಸ್ಥಾನ ರದ್ದುಪಡಿಸಿದೆ. ಇದರಿಂದಾಗಿ ರೇಂಜರ್ಸ್ ಗಳು ನಮ್ಮಗೆ ಸಿಹಿ ನೀಡದೆ ಇರುವ ಒಳ್ಳೇಯ ಅವಕಾಶ ಸಿಕ್ಕಂತಾಗಿದೆ ಎಂದು ಬಿಎಸ್ ಎಫ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

2016 ಅಕ್ಟೋಬರ್ ತಿಂಗಳಲ್ಲಿ ಸರ್ಜಿಕಲ್ ಸ್ಟ್ರೈಕ್ ಆದ ನಂತರ ಬಿಎಸ್ ಎಫ್ ಯೋಧರು ಪಾಕಿಸ್ತಾನ ರೇಂಜರ್ಸ್ ಗಳೊಂದಿಗೆ ಸಿಹಿ ವಿನಿಮಯ ಮಾಡಿಕೊಂಡಿರಲಿಲ್ಲ. ಅಂತಾರಾಷ್ಟ್ರೀಯ ಗಡಿ ರೇಖೆಯಲ್ಲಿ ಕದನ ವಿರಾಮ ಉಲ್ಲಂಘನೆ ಹಿನ್ನೆಲೆಯಲ್ಲಿ ಕಳೆದ ವರ್ಷ ಗಣರಾಜ್ಯೋತ್ಸವ ಸಂದರ್ಭದಲ್ಲಿಯೂ ಪಾಕ್ ರೇಂಜರ್ಸ್ ಗಳೊಂದಿಗೆ ಸಿಹಿ ವಿನಿಮಯ ಮಾಡಿಕೊಂಡಿರಲಿಲ್ಲ. 

ಉಭಯ ದೇಶಗಳ ನಡುವೆ ಸಂಬಂಧ ತೀರಾ ಕೆಳಮಟ್ಟಕ್ಕೆ ತಲುಪಿದ್ದರೂ ಸಿಹಿ ವಿನಿಮಯ ಮಾಡಿಕೊಳ್ಳುವ ಒಳ್ಳೇಯ ಪದ್ಧತಿ. ಇದನ್ನು ಮುಂದುವರೆಸಬೇಕೆಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT