ದೇಶ

370ನೇ ವಿಧಿ ರದ್ದು: ವಾಘಾ ಗಡಿಯಲ್ಲಿ ಬಿಎಸ್ ಎಫ್ , ಪಾಕ್ ರೆಂಜರ್ಸ್ ನಡುವೆ ಸಿಹಿ ವಿನಿಮಯ ಇಲ್ಲ

ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನ ಕಲ್ಪಿಸುತ್ತಿದ್ದ 370ನೇ ವಿಧಿ ರದ್ದುಗೊಂಡ ನಂತರ ಭಾರತ ಹಾಗೂ ಪಾಕಿಸ್ತಾನ ನಡುವಣ ಸಂಬಂಧ ಮತ್ತಷ್ಟು ಹದಗೆಟ್ಟಿದ್ದು, ಅಠಾರಿ- ವಾಘಾ ಗಡಿಯಲ್ಲಿ ಈದ್ ಹಬ್ಬದ ಪ್ರಯುಕ್ತ  ಬಿಎಸ್ಎಫ್ ಹಾಗೂ ಪಾಕಿಸ್ತಾನದ ರೇಂಜರ್ಸ್ ಗಳ ನಡುವೆ  ಸಿಹಿ ವಿನಿಮಯ ನಡೆದಿಲ್ಲ.

ನವದೆಹಲಿ: ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನ ಕಲ್ಪಿಸುತ್ತಿದ್ದ 370ನೇ ವಿಧಿ ರದ್ದುಗೊಂಡ ನಂತರ ಭಾರತ ಹಾಗೂ ಪಾಕಿಸ್ತಾನ ನಡುವಣ ಸಂಬಂಧ ಮತ್ತಷ್ಟು ಹದಗೆಟ್ಟಿದ್ದು, ಅಠಾರಿ- ವಾಘಾ ಗಡಿಯಲ್ಲಿ ಈದ್ ಹಬ್ಬದ ಪ್ರಯುಕ್ತ  ಬಿಎಸ್ಎಫ್ ಹಾಗೂ ಪಾಕಿಸ್ತಾನದ ರೇಂಜರ್ಸ್ ಗಳ ನಡುವೆ  ಸಿಹಿ ವಿನಿಮಯ ನಡೆದಿಲ್ಲ.

ಪಾಕಿಸ್ತಾನದ ರೇಂಜರ್ಸ್ ಗಳಿಗೆ ಸಿಹಿ ಕೊಡಲು ಬಿಎಸ್ ಎಫ್ ಬಯಸಿದ್ದರೂ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂಬುದು ಮೂಲಗಳಿಂದ ತಿಳಿದುಬಂದಿದೆ.

ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ, ದೀಪಾವಳಿ, ಈದ್ ಹಬ್ಬಗಳಲ್ಲಿ ಬಿಎಸ್ ಎಫ್ ಹಾಗೂ ಪಾಕಿಸ್ತಾನದ ರೆಂಜರ್ಸ್ ಗಳ ನಡುವೆ ಕೊಡುಗೆಗಳನ್ನು ನೀಡಿ  ಸಿಹಿ ವಿನಿಮಯ ಮಾಡಿಕೊಳ್ಳುವ ಸಂಪ್ರದಾಯ ಹಿಂದಿನಿಂದಲೂ ನಡೆದುಕೊಂಡು ಬಂದಿತ್ತು.

 ಆದರೆ, ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ ಉಭಯ ದೇಶಗಳ ನಡುವಿನ ರಾಯಬಾರಿ ಸಂಬಂಧ ಹದಗೆಟ್ಟಿತ್ತು.ಭಾರತದೊಂದಿಗೆ ವ್ಯಾಪಾರ ಸಂಪರ್ಕವನ್ನು ಪಾಕಿಸ್ಥಾನ ರದ್ದುಪಡಿಸಿದೆ. ಇದರಿಂದಾಗಿ ರೇಂಜರ್ಸ್ ಗಳು ನಮ್ಮಗೆ ಸಿಹಿ ನೀಡದೆ ಇರುವ ಒಳ್ಳೇಯ ಅವಕಾಶ ಸಿಕ್ಕಂತಾಗಿದೆ ಎಂದು ಬಿಎಸ್ ಎಫ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

2016 ಅಕ್ಟೋಬರ್ ತಿಂಗಳಲ್ಲಿ ಸರ್ಜಿಕಲ್ ಸ್ಟ್ರೈಕ್ ಆದ ನಂತರ ಬಿಎಸ್ ಎಫ್ ಯೋಧರು ಪಾಕಿಸ್ತಾನ ರೇಂಜರ್ಸ್ ಗಳೊಂದಿಗೆ ಸಿಹಿ ವಿನಿಮಯ ಮಾಡಿಕೊಂಡಿರಲಿಲ್ಲ. ಅಂತಾರಾಷ್ಟ್ರೀಯ ಗಡಿ ರೇಖೆಯಲ್ಲಿ ಕದನ ವಿರಾಮ ಉಲ್ಲಂಘನೆ ಹಿನ್ನೆಲೆಯಲ್ಲಿ ಕಳೆದ ವರ್ಷ ಗಣರಾಜ್ಯೋತ್ಸವ ಸಂದರ್ಭದಲ್ಲಿಯೂ ಪಾಕ್ ರೇಂಜರ್ಸ್ ಗಳೊಂದಿಗೆ ಸಿಹಿ ವಿನಿಮಯ ಮಾಡಿಕೊಂಡಿರಲಿಲ್ಲ. 

ಉಭಯ ದೇಶಗಳ ನಡುವೆ ಸಂಬಂಧ ತೀರಾ ಕೆಳಮಟ್ಟಕ್ಕೆ ತಲುಪಿದ್ದರೂ ಸಿಹಿ ವಿನಿಮಯ ಮಾಡಿಕೊಳ್ಳುವ ಒಳ್ಳೇಯ ಪದ್ಧತಿ. ಇದನ್ನು ಮುಂದುವರೆಸಬೇಕೆಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT