ಸಂಗ್ರಹ ಚಿತ್ರ 
ದೇಶ

ಕಾಶ್ಮೀರ ಶಾಂತವಾಗಿಲ್ಲ; ಕೊನೆಗೂ ಮೌನ ಮುರಿದ ಗೃಹ ಇಲಾಖೆ

ಸೌರಾದಲ್ಲಿ ನಡೆದ ಕಲ್ಲು ತೂರಾಟ ಘಟನೆ ಬಳಿಕ ಕಣಿವೆ ರಾಜ್ಯದಲ್ಲಿ ಪ್ರತಿಭಟನೆ ತೀವ್ರ

ನವದೆಹಲಿ: ವಿಧಿ 370 ರದ್ದತಿ ಬಳಿಕ ಕಾಶ್ಮೀರದಲ್ಲಿ ಎಲ್ಲವೂ ಸಾಮಾನ್ಯವಾಗಿಲ್ಲ. ಕಾಶ್ಮೀರ ಶಾಂತವಾಗಿಲ್ಲ ಎಂದು ಹೇಳುವ ಮೂಲಕ ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಇಲಾಖೆ ಕೊನೆಗೂ ತನ್ನ ಮುರಿದಿದೆ.

ಈ ಹಿಂದೆ ಗೃಹ ಇಲಾಖೆಯ ಅಧಿಕಾರಿಗಳು ಕಾಶ್ಮೀರದಲ್ಲಿ ಯಾವುದೇ ರೀತಿಯ ಸಮಸ್ಯೆ ಇಲ್ಲ. ಎಲ್ಲವೂ ಶಾಂತವಾಗಿದೆ ಎಂದು ಹೇಳಿದ್ದರು. ಆದರೆ ಸೌರಾದಲ್ಲಿ ನಡೆದಿದ್ದ ಪ್ರತಿಭಟನೆ ಮತ್ತು ಕಲ್ಲು ತೂರಾಟ ಪ್ರಕರಣವನ್ನು ಬಿಬಿಸಿ ಪತ್ರಿಕೆ ವರದಿ ಮಾಡಿದ ಬೆನ್ನಲ್ಲೇ ಕೇಂದ್ರ ಗೃಹ ಇಲಾಖೆ ಈ ಕುರಿತಂತೆ ಸ್ಪಷ್ಟನೆ ನೀಡಿದೆ. ಆಗಸ್ಟ್ 8ರಂದು ಸೌರಾದಲ್ಲಿ ನಡೆದಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ, ಕಲ್ಲು ತೂರಾಟವಾಗಿತ್ತು ಎಂದು ಕೇಂದ್ರ ಗೃಹ ಇಲಾಖೆ ಒಪ್ಪಿಕೊಂಡಿದೆ.

ಅಲ್ಲದೆ ಈ ಘಟನೆ ಬಳಿಕ ಕಾಶ್ಮೀರದಲ್ಲಿ ಪ್ರತಿಭಟನೆಗಳ ಸಂಖ್ಯೆ ಹೆಚ್ಚಾಗಿದ್ದು, ಬಕ್ರೀದ್ ಹಬ್ಬದ ನಿಮಿತ್ತ ಪ್ರಾರ್ಥನೆಗಾಗಿ ಬಂದಿದ್ದ ನೂರಾರು ಮಂದಿ ಸಮಯ ಸಿಕ್ಕಾಗಲೆಲ್ಲ ಪ್ರತಿಭಟನೆ ನಡೆಸಿದ್ದಾರೆ. ಈ ಪೈಕಿ ಕಲ್ಲು ತೂರಾಟದ ಪ್ರಕರಣಗಳೂ ಕೂಡ ಅಲ್ಲಲ್ಲಿ ಕೇಳಿ ಬಂದಿದೆ. ಅಂತೆಯೇ ಸೇನಾಪಡೆಗಳ ಮೇಲೂ ಅಪ್ರಚೋದಿತ ಕಲ್ಲು ತೂರಾಟದಾಳಿಯಾಗಿದೆ ಎಂದು ಗೃಹ ಇಲಾಖೆ ಹೇಳಿದೆ.

ಈ ಕುರಿತಂತೆ ಗೃಹ ಇಲಾಖೆ ಟ್ವೀಟ್ ಮಾಡಿದ್ದು, ಕಾಶ್ಮೀರದ ಎಲ್ಲ ಪರಿಸ್ಥಿತಿಯನ್ನೂ ನಿಭಾಯಿಸಲು ಭದ್ರತಾ ಪಡೆಗಳು ಸರ್ವಸನ್ನದ್ಧವಾಗಿದೆ. ಈ ಕುರಿತಂತೆ ಕೇಂದ್ರ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!