ಕಚ್ ಗಡಿಯಲ್ಲಿ ತೀವ್ರ ಶೋಧ 
ದೇಶ

ಗುಜರಾತ್ ಗಡಿ ಮೂಲಕ ಉಗ್ರ ಪ್ರವೇಶ ಕುರಿತ ಗುಪ್ತಚರ ಇಲಾಖೆ ಎಚ್ಚರಿಕೆ, ತೀವ್ರ ಕಟ್ಟೆಚ್ಚರ

ಗುಜರಾತ್ ಸಮುದ್ರ ಮಾರ್ಗವಾಗಿ ಪಾಕಿಸ್ತಾನದ ಮೂಲದ ಉಗ್ರರು ಭಾರತ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದ್ದು, ಈ ಸಂಬಂಧ ಗಡಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.

ಅಹ್ಮದಾಬಾದ್: ಗುಜರಾತ್ ಸಮುದ್ರ ಮಾರ್ಗವಾಗಿ ಪಾಕಿಸ್ತಾನದ ಮೂಲದ ಉಗ್ರರು ಭಾರತ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದ್ದು, ಈ ಸಂಬಂಧ ಗಡಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.

ಗುಜರಾತ್ ಕಚ್ ಬಂದರು ಪ್ರದೇಶದ ಮೂಲಕವಾಗಿ ಪಾಕಿಸ್ತಾನ ಮೂಲದ ಸುಮಾರು 8-10 ಮಂದಿ ಉಗ್ರರು ಪ್ರತ್ಯೇಕ ತಂಡಗಳಾಗಿ ಭಾರತ ಪ್ರವೇಶ ಮಾಡಲು ಸಿದ್ಧತೆ ನಡೆಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಗುಜರಾತ್ ಪೊಲೀಸರಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ. ಹೀಗಾಗಿ ಗುಜರಾತ್ ತೀರದಾದ್ಯಂತ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದು, ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಿದ್ದಾರೆ ಎಂದು ತಿಳಿದುಬಂದಿದೆ.

ಅಂತೆಯೇ ಪ್ರತೀ 2 ಗಂಟೆಗೆ ಒಮ್ಮೆ ಸಮುದ್ರ ಮಾರ್ಗದಲ್ಲಿ ಸಂಚರಿಸುವ ಎಲ್ಲ ರೀತಿಯ ಪ್ರಯಾಣಿಕ ಮತ್ತು ಸರಕು ಸಾಗಾಣಿಕಾ ಹಡಗುಗಳನ್ನು ತೀವ್ರ ಶೋಧ ನಡೆಸಿದ್ದಾರೆ. ಈ ಸಂಬಂಧ ನೌಕೆ ಮತ್ತು ಗಡಿ ಭದ್ರತಾ ಪಡೆಗಳು ಜಂಟಿಯಾಗಿ ಶೋಧ ಕಾರ್ಯದಲ್ಲಿ ತೊಡಗಿವೆ ಎಂದು ತಿಳಿದುಬಂದಿದೆ.

ಈ ಕುರಿತು ಮಾತನಾಡಿರುವ ಪೂರ್ವ ಕಚ್ ಭಾಗದ ಎಸ್ ಪಿ ಪರೀಕ್ಷಿತಾ ರಾಥೋಡ್ ಅವರು, ಉಗ್ರರು ಕಚ್ ಮೂಲಕ ಭಾರತ ಪ್ರವೇಶಿಸುವ ಕುರಿತು ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ನಾವು ಕೂಡ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಹೆಚ್ಚುವರಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಿದ್ದೇವೆ. ಬಂದರು ಪ್ರದೇಶದಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಿದ್ದು, ಯಾವುದೇ ರೀತಿಯ ಶಂಕಿತ ವ್ಯಕ್ತಿ, ಬೋಟ್ ಕಾಣಿಸಿಕೊಂಡರೆ ಕೂಡಲೇ ಮಾಹಿತಿ ನೀಡುವಂತೆ ಸ್ಥಳೀಯ ಮೀನುಗಾರರಿಗೆ ಸಂದೇಶ ಕೂಡ ರವಾನಿಸಿದ್ದೇವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

SCROLL FOR NEXT