ನದಿಯ ಬಳಿ ಇರುವ ಮಾಜಿ ಮುಖ್ಯಮಂತ್ರಿ ಎನ್ಚಂದ್ರಬಾಬು ನಾಯ್ಡು ಅವರ ನಿವಾಸ 
ದೇಶ

ಮುಳುಗಡೆ ಭೀತಿಯಲ್ಲಿ ಚಂದ್ರಬಾಬುನಾಯ್ಡು ನಿವಾಸ, ಕುಟುಂಬ ಹೈದರಾಬಾದಿಗೆ ಸ್ಥಳಾಂತರ

ಕೃಷ್ಣ ನದಿಯ ಒಳಹರಿವು ಹೆಚ್ಚಾಗುತ್ತಿರುವ ಕಾರಣ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ನದಿಯ ಪಕ್ಷದ  ನಿವಾಸ  ಪ್ರವಾಹದ ಭೀತಿ ಎದುರಿಸುತ್ತಿದೆ .

ವಿಜಯವಾಡ: ಕೃಷ್ಣ ನದಿಯ ಒಳಹರಿವು ಹೆಚ್ಚಾಗುತ್ತಿರುವ ಕಾರಣ ನದಿಯ ಬಳಿ ಇರುವ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ನಿವಾಸ ಪ್ರವಾಹದ ಭೀತಿ ಎದುರಿಸುತ್ತಿದೆ.

ಈ ರಾತ್ರಿಯ ಹೊತ್ತಿಗೆ ಒಳಹರಿವು ಮತ್ತಷ್ಟು ಹೆಚ್ಚಾಗಿ ಮತ್ತು ಪ್ರವಾಹದ ನೀರು ನಾಯ್ಡು ನಿವಾಸಕ್ಕೆ ಅವರಿಸಿಕೊಳ್ಳುವ ಸಾಧ್ಯತೆಯ ಕಾರಣ ಅವರ ಕುಟುಂಬ ಹೈದರಾಬಾದಿಗೆ ತೆರಳಿದೆ.  

ನಾಯ್ಡು ಅವರ ನಿವಾಸ ಕೃಷ್ಣ ನದಿಯ ದಕ್ಷಿಣ ದಂಡೆಯಲ್ಲಿರುವ ನದಿಯಿಂದ ಕೇವಲ 50 ಮೀಟರ್ ದೂರದಲ್ಲಿ ಹಾಗೂ ಪ್ರಕಾಶಂ ಜಲಾಶದಿಂದ ಸುಮಾರು ಎರಡೂವರೆ ಕಿಲೋಮೀಟರ್ ದೂರದಲ್ಲಿದೆ. ಈ ನಡುವೆ ಪ್ರಕಾಶಂ, ಪುಲಿಚಿಂತಲಾ ಜಲಾಶದಿಂದ ಇಲ್ಲಿಯವರೆಗೆ 4.12 ಲಕ್ಷ ಕ್ಯೂಸೆಕ್ ನೀರು ಹರಿಯಬಿಡಲಾಗಿದೆ. ಈ ಕಾರಣದಿಂದ ಮುನ್ನೆಚ್ಚರಿಕೆ ಕ್ರಮವಾಗಿ, ನಾಯ್ಡು ಅವರ ಕುಟುಂಬದ ಕಾರುಗಳನ್ನು ಖಾಸಗಿ ರೆಸಾರ್ಟ್‌ಗೆ ವರ್ಗಾಯಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮಾಜಿ ಮುಖ್ಯಮಂತ್ರಿ ನಾಯ್ಡು ಅವರು ಈಗ ಸದ್ಯ ವಿಜಯವಾಡಲ್ಲಿ ಇಲ್ಲ ಎಂದು ಹೇಳಲಾಗಿದೆ. ಈ ನಡುವೆ ಪ್ರಕಾಶಂ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಚಿವರಾದ  ಕೆ. ಕನ್ನಬಾಬು ಮತ್ತು ವಿ.ಶ್ರೀನಿವಾಸ್ ಅವರು ತಮ್ಮ ನಿವಾಸಕ್ಕೆ ಪ್ರವಾಹದ ನೀರು ಪ್ರವೇಶಿಸಲಿದೆ ಎಂಬ ಭೀತಿಯಿಂದ ನಾಯ್ಡು ಅವರು, ಕುಟುಂಬ ಹೈದರಾಬಾದಿಗೆ ತೆರಳಿದ್ದಾರೆ ಎಂದರು. 

ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರುಗಳು ಎಸ್ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರದ ನದಿಯ ಪಕ್ಕದಲ್ಲಿ ನಿರ್ಮಿಸಲಾಗಿದ್ದ ಎಲ್ಲ ಅನಧಿಕೃತ ಕಟ್ಟಡಗಳನ್ನು ನೆಲಸಮ ಮಾಡಲು ತೀರ್ಮಾನಿಸಿವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT