ನದಿಯ ಬಳಿ ಇರುವ ಮಾಜಿ ಮುಖ್ಯಮಂತ್ರಿ ಎನ್ಚಂದ್ರಬಾಬು ನಾಯ್ಡು ಅವರ ನಿವಾಸ 
ದೇಶ

ಮುಳುಗಡೆ ಭೀತಿಯಲ್ಲಿ ಚಂದ್ರಬಾಬುನಾಯ್ಡು ನಿವಾಸ, ಕುಟುಂಬ ಹೈದರಾಬಾದಿಗೆ ಸ್ಥಳಾಂತರ

ಕೃಷ್ಣ ನದಿಯ ಒಳಹರಿವು ಹೆಚ್ಚಾಗುತ್ತಿರುವ ಕಾರಣ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ನದಿಯ ಪಕ್ಷದ  ನಿವಾಸ  ಪ್ರವಾಹದ ಭೀತಿ ಎದುರಿಸುತ್ತಿದೆ .

ವಿಜಯವಾಡ: ಕೃಷ್ಣ ನದಿಯ ಒಳಹರಿವು ಹೆಚ್ಚಾಗುತ್ತಿರುವ ಕಾರಣ ನದಿಯ ಬಳಿ ಇರುವ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ನಿವಾಸ ಪ್ರವಾಹದ ಭೀತಿ ಎದುರಿಸುತ್ತಿದೆ.

ಈ ರಾತ್ರಿಯ ಹೊತ್ತಿಗೆ ಒಳಹರಿವು ಮತ್ತಷ್ಟು ಹೆಚ್ಚಾಗಿ ಮತ್ತು ಪ್ರವಾಹದ ನೀರು ನಾಯ್ಡು ನಿವಾಸಕ್ಕೆ ಅವರಿಸಿಕೊಳ್ಳುವ ಸಾಧ್ಯತೆಯ ಕಾರಣ ಅವರ ಕುಟುಂಬ ಹೈದರಾಬಾದಿಗೆ ತೆರಳಿದೆ.  

ನಾಯ್ಡು ಅವರ ನಿವಾಸ ಕೃಷ್ಣ ನದಿಯ ದಕ್ಷಿಣ ದಂಡೆಯಲ್ಲಿರುವ ನದಿಯಿಂದ ಕೇವಲ 50 ಮೀಟರ್ ದೂರದಲ್ಲಿ ಹಾಗೂ ಪ್ರಕಾಶಂ ಜಲಾಶದಿಂದ ಸುಮಾರು ಎರಡೂವರೆ ಕಿಲೋಮೀಟರ್ ದೂರದಲ್ಲಿದೆ. ಈ ನಡುವೆ ಪ್ರಕಾಶಂ, ಪುಲಿಚಿಂತಲಾ ಜಲಾಶದಿಂದ ಇಲ್ಲಿಯವರೆಗೆ 4.12 ಲಕ್ಷ ಕ್ಯೂಸೆಕ್ ನೀರು ಹರಿಯಬಿಡಲಾಗಿದೆ. ಈ ಕಾರಣದಿಂದ ಮುನ್ನೆಚ್ಚರಿಕೆ ಕ್ರಮವಾಗಿ, ನಾಯ್ಡು ಅವರ ಕುಟುಂಬದ ಕಾರುಗಳನ್ನು ಖಾಸಗಿ ರೆಸಾರ್ಟ್‌ಗೆ ವರ್ಗಾಯಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮಾಜಿ ಮುಖ್ಯಮಂತ್ರಿ ನಾಯ್ಡು ಅವರು ಈಗ ಸದ್ಯ ವಿಜಯವಾಡಲ್ಲಿ ಇಲ್ಲ ಎಂದು ಹೇಳಲಾಗಿದೆ. ಈ ನಡುವೆ ಪ್ರಕಾಶಂ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಚಿವರಾದ  ಕೆ. ಕನ್ನಬಾಬು ಮತ್ತು ವಿ.ಶ್ರೀನಿವಾಸ್ ಅವರು ತಮ್ಮ ನಿವಾಸಕ್ಕೆ ಪ್ರವಾಹದ ನೀರು ಪ್ರವೇಶಿಸಲಿದೆ ಎಂಬ ಭೀತಿಯಿಂದ ನಾಯ್ಡು ಅವರು, ಕುಟುಂಬ ಹೈದರಾಬಾದಿಗೆ ತೆರಳಿದ್ದಾರೆ ಎಂದರು. 

ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರುಗಳು ಎಸ್ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರದ ನದಿಯ ಪಕ್ಕದಲ್ಲಿ ನಿರ್ಮಿಸಲಾಗಿದ್ದ ಎಲ್ಲ ಅನಧಿಕೃತ ಕಟ್ಟಡಗಳನ್ನು ನೆಲಸಮ ಮಾಡಲು ತೀರ್ಮಾನಿಸಿವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

'ಮಟನ್ ಹಾಕ್ತೀವಿ ಅಂತ ಹೇಳಿ ಚಿಕನ್ ಕೊಟ್ರು': ರಣಾಂಗಣವಾಯ್ತು 'ನಿಕಾಹ್ ಸಮಾರಂಭ', 12 ಮಂದಿಗೆ ಗಾಯ, Video

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!