ದೇಶ

ಇತರರಿಂದ ನಾವು ದೇಶಭಕ್ತಿ ಕಲಿಯುವ ಅಗತ್ಯವಿಲ್ಲ: ಸಿಎಂ ಮಮತಾ ಬ್ಯಾನರ್ಜಿ

Vishwanath S

ಕೋಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಇತರರಿಂದ ನಾವು ದೇಶಭಕ್ತಿ ಕಲಿಯುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. 

ಇಡೀ ದೇಶವೇ 73ನೇ ಸ್ವತಂತ್ರ್ಯೋತ್ಸವದ ಸಂಭ್ರಮದಲ್ಲಿದ್ದರೆ ಇತ್ತ ಮಮತಾ ಬ್ಯಾನರ್ಜಿ ಮಾತ್ರ ಕೇಂದ್ರ ಸರ್ಕಾರದ ವಿರುದ್ಧ ಹಾರಿಹಾಯ್ದಿದ್ದಾರೆ.  ಇತರರಿಂದ ದೇಶಭಕ್ತಿ ಕುರಿತು ಕಲಿಯುವ ಅಗತ್ಯವಿಲ್ಲ. ನಮಗೆ ಸ್ವಾತಂತ್ರ್ಯ ಲಭಿಸಿದೆ. ಇಂದು ನಮ್ಮ ದೇಶವು ಪ್ರಗತಿ ಹೊಂದುತ್ತಿದೆ ಎಂದು ಹೇಳಿದರು. 

ಇನ್ನು ಸ್ವಾತಂತ್ರ್ಯದ ಅರ್ಥವೆನೆಂದರೆ ಅದು ಎಲ್ಲ ಜನರಿಗೂ ಮಾತನಾಡುವ ಅವಕಾಶವನ್ನು ಕಲ್ಪಿಸುವುದಾಗಿದೆ ಎಂದರು.

SCROLL FOR NEXT