ದೇಶ

ಸಂವಿಧಾನದ 370ನೇ ವಿಧಿ ರದ್ದತಿ ಮೂಲಕ ಸರ್ದಾರ್ ವಲ್ಲಭಬಾಯ್ ಪಟೇಲ್ ಕನಸು ನನಸು- ಪ್ರಧಾನಿ

ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಒದಗಿಸುತ್ತಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸುವ ಮೂಲಕ ಸ್ವಾತಂತ್ರ್ಯ ಭಾರತದ ಮೊದಲ ಗೃಹ ಮಂತ್ರಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಕನಸನ್ನು ನನಸು ಮಾಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನವದೆಹಲಿ: ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಒದಗಿಸುತ್ತಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸುವ ಮೂಲಕ ಸ್ವಾತಂತ್ರ್ಯ ಭಾರತದ ಮೊದಲ ಗೃಹ ಮಂತ್ರಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಕನಸನ್ನು ನನಸು ಮಾಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

 ಕೆಂಪುಕೋಟೆಯಲ್ಲಿಂದು 73ನೇ ಸ್ವಾತಂತ್ಸೋವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಹೊಸ ಸರ್ಕಾರ  ಅಧಿಕಾರಕ್ಕೆ ಬಂದು ಇನ್ನೂ 10 ವಾರಗಳು ಪೂರ್ಣಗೊಂಡಿಲ್ಲ. ಆದರೆ, ಈ ಕಿರು ಅವಧಿಯಲ್ಲಿಯೇ ಅನೇಕ ಪ್ರಮುಖವಾದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.  ಸಂವಿಧಾನದ 370 ನೇ ವಿಧಿ, ತ್ರಿವಳಿ ತಲಾಖ್ ಪದ್ದತಿಗೆ ಅಂತ್ಯ ಹಾಡಲಾಗಿದೆ ಎಂದು ತಿಳಿಸಿದರು.

370ನೇ ವಿಧಿಯಿಂದಾಗಿ ಜಮ್ಮು- ಕಾಶ್ಮೀರ ಹಾಗೂ ಲಡಾಖ್ ನಲ್ಲಿ ಭ್ರಷ್ಟಾಚಾರ, ಭಯೋತ್ಪಾದನೆ ಹೆಚ್ಚಾಗಿತ್ತು. ಮಹಿಳೆಯರು, ಮಕ್ಕಳು, ದೀನ ದಲಿತರ ಹಕ್ಕುಗಳನ್ನು ಕಸಿದುಕೊಳ್ಳಲಾಗಿತ್ತು. ನೈರ್ಮಲ್ಯೀಕರಣ ವ್ಯವಸ್ಥೆ ಎಂಬುದೇ ಇರಲಿಲ್ಲ ಇದನ್ನು ಹೇಗೆ ಒಪ್ಪಿಕೊಳ್ಳಲಿ ಎಂದು ಪ್ರಶ್ನಿಸಿದ ಮೋದಿ, 370ನೇ ವಿಧಿಯನ್ನು ಸಮರ್ಥಿಸಿಕೊಳ್ಳುವವರು ತಮ್ಮನ್ನು ತಾವೇ ಪ್ರಶ್ನಿಸಿಕೊಳ್ಳಬೇಕಾಗಿದೆ. ಅಂತಿಮವಾಗಿ ಬಹುಮತದೊಂದಿಗೆ ಈ ವಿಧಿಯನ್ನು ರದ್ದುಪಡಿಸಲಾಗಿದೆ ಎಂದು ತಿಳಿಸಿದರು.


ದೇಶದಲ್ಲಿನ ವಿವಿಧ ಭಾಗಗಳಲ್ಲಿ ಸಂಭವಿಸಿರುವ ಪ್ರವಾಹ  ಕುರಿತು ಕಳವಳ ವ್ಯಕ್ತಪಡಿಸಿ, ರಕ್ಷಾ ಬಂಧನ್ ಹಬ್ಬದ ಶುಭಾಶಯ ಕೋರುತ್ತಾ ಭಾಷಣ ಆರಂಭಿಸಿದ ಮೋದಿ, ಪ್ರವಾಹ ಪೀಡಿತ ಜನರ ಸಂಕಷ್ಟದಲ್ಲಿ  ಎಲ್ಲರೂ ಒಗ್ಗೂಡಬೇಕಾಗಿದೆ ಎಂದರು. 

ಜನಸಂಖ್ಯಾ ಹೆಚ್ಚಳದಿಂದ ಮುಂದಿನ ಪೀಳಿಗೆಗೆ ತೊಂದರೆಯಾಗಲಿದೆ. ಸಣ್ಣ ಕುಟುಂಬದ ನೀತಿ ಅನುಕರಣೆಯಿಂದ ದೇಶದ ಅಭಿವೃದ್ಧಿ ಹಾಗೂ ದೇಶಭಕ್ತಿ ಹೆಚ್ಚಾಗಲಿದೆ. ಭ್ರಷ್ಟಾಚಾರ, ಕಪ್ಪು ಹಣ ತೊಡೆದುಹಾಕುವ ನಿಟ್ಟಿನಲ್ಲಿ ಎಲ್ಲರೂ ಪ್ರಯತ್ನಿಸಬೇಕಾಗಿದೆ ಎಂದು ಮೋದಿ ಕರೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT