ದೇಶ

ಸಂವಿಧಾನದ 370ನೇ ವಿಧಿ ರದ್ದತಿ ಮೂಲಕ ಸರ್ದಾರ್ ವಲ್ಲಭಬಾಯ್ ಪಟೇಲ್ ಕನಸು ನನಸು- ಪ್ರಧಾನಿ

ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಒದಗಿಸುತ್ತಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸುವ ಮೂಲಕ ಸ್ವಾತಂತ್ರ್ಯ ಭಾರತದ ಮೊದಲ ಗೃಹ ಮಂತ್ರಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಕನಸನ್ನು ನನಸು ಮಾಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನವದೆಹಲಿ: ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಒದಗಿಸುತ್ತಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸುವ ಮೂಲಕ ಸ್ವಾತಂತ್ರ್ಯ ಭಾರತದ ಮೊದಲ ಗೃಹ ಮಂತ್ರಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಕನಸನ್ನು ನನಸು ಮಾಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

 ಕೆಂಪುಕೋಟೆಯಲ್ಲಿಂದು 73ನೇ ಸ್ವಾತಂತ್ಸೋವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಹೊಸ ಸರ್ಕಾರ  ಅಧಿಕಾರಕ್ಕೆ ಬಂದು ಇನ್ನೂ 10 ವಾರಗಳು ಪೂರ್ಣಗೊಂಡಿಲ್ಲ. ಆದರೆ, ಈ ಕಿರು ಅವಧಿಯಲ್ಲಿಯೇ ಅನೇಕ ಪ್ರಮುಖವಾದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.  ಸಂವಿಧಾನದ 370 ನೇ ವಿಧಿ, ತ್ರಿವಳಿ ತಲಾಖ್ ಪದ್ದತಿಗೆ ಅಂತ್ಯ ಹಾಡಲಾಗಿದೆ ಎಂದು ತಿಳಿಸಿದರು.

370ನೇ ವಿಧಿಯಿಂದಾಗಿ ಜಮ್ಮು- ಕಾಶ್ಮೀರ ಹಾಗೂ ಲಡಾಖ್ ನಲ್ಲಿ ಭ್ರಷ್ಟಾಚಾರ, ಭಯೋತ್ಪಾದನೆ ಹೆಚ್ಚಾಗಿತ್ತು. ಮಹಿಳೆಯರು, ಮಕ್ಕಳು, ದೀನ ದಲಿತರ ಹಕ್ಕುಗಳನ್ನು ಕಸಿದುಕೊಳ್ಳಲಾಗಿತ್ತು. ನೈರ್ಮಲ್ಯೀಕರಣ ವ್ಯವಸ್ಥೆ ಎಂಬುದೇ ಇರಲಿಲ್ಲ ಇದನ್ನು ಹೇಗೆ ಒಪ್ಪಿಕೊಳ್ಳಲಿ ಎಂದು ಪ್ರಶ್ನಿಸಿದ ಮೋದಿ, 370ನೇ ವಿಧಿಯನ್ನು ಸಮರ್ಥಿಸಿಕೊಳ್ಳುವವರು ತಮ್ಮನ್ನು ತಾವೇ ಪ್ರಶ್ನಿಸಿಕೊಳ್ಳಬೇಕಾಗಿದೆ. ಅಂತಿಮವಾಗಿ ಬಹುಮತದೊಂದಿಗೆ ಈ ವಿಧಿಯನ್ನು ರದ್ದುಪಡಿಸಲಾಗಿದೆ ಎಂದು ತಿಳಿಸಿದರು.


ದೇಶದಲ್ಲಿನ ವಿವಿಧ ಭಾಗಗಳಲ್ಲಿ ಸಂಭವಿಸಿರುವ ಪ್ರವಾಹ  ಕುರಿತು ಕಳವಳ ವ್ಯಕ್ತಪಡಿಸಿ, ರಕ್ಷಾ ಬಂಧನ್ ಹಬ್ಬದ ಶುಭಾಶಯ ಕೋರುತ್ತಾ ಭಾಷಣ ಆರಂಭಿಸಿದ ಮೋದಿ, ಪ್ರವಾಹ ಪೀಡಿತ ಜನರ ಸಂಕಷ್ಟದಲ್ಲಿ  ಎಲ್ಲರೂ ಒಗ್ಗೂಡಬೇಕಾಗಿದೆ ಎಂದರು. 

ಜನಸಂಖ್ಯಾ ಹೆಚ್ಚಳದಿಂದ ಮುಂದಿನ ಪೀಳಿಗೆಗೆ ತೊಂದರೆಯಾಗಲಿದೆ. ಸಣ್ಣ ಕುಟುಂಬದ ನೀತಿ ಅನುಕರಣೆಯಿಂದ ದೇಶದ ಅಭಿವೃದ್ಧಿ ಹಾಗೂ ದೇಶಭಕ್ತಿ ಹೆಚ್ಚಾಗಲಿದೆ. ಭ್ರಷ್ಟಾಚಾರ, ಕಪ್ಪು ಹಣ ತೊಡೆದುಹಾಕುವ ನಿಟ್ಟಿನಲ್ಲಿ ಎಲ್ಲರೂ ಪ್ರಯತ್ನಿಸಬೇಕಾಗಿದೆ ಎಂದು ಮೋದಿ ಕರೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT