ದೇಶ

ರೈಲ್ವೆ ಸಚಿವರನ್ನು ಭೇಟಿಯಾದ ಯಡಿಯೂರಪ್ಪ: ವಿವಿಧ ಯೋಜನೆ ಕುರಿತು ಚರ್ಚೆ  

ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿಯಾಗಿ ವಿವಿಧ ಯೋಜನೆ ಕುರಿತಂತೆ ಚರ್ಚೆ ನಡೆಸಿದ್ದಾರೆ. ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಯೋಜನೆಗಳಿಗೆ ಮಂಜೂರಾತಿ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿಯಾಗಿ ವಿವಿಧ ಯೋಜನೆ ಕುರಿತಂತೆ ಚರ್ಚೆ ನಡೆಸಿದ್ದಾರೆ. ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಯೋಜನೆಗಳಿಗೆ ಮಂಜೂರಾತಿ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರು ನಗರದ ಸಂಚಾರಿ ದಟ್ಟಣೆ ನಿವಾರಿಸುವ ಉದ್ದೇಶದಿಂದ ಬೆಂಗಳೂರು-ಉಪನಗರ ರೈಲ್ವೆ ಯೋಜನೆ ಜಾರಿಗೆ ಅಗತ್ಯವಿರುವ ಎಲ್ಲಾ ಸಹಕಾರ ನೀಡುವಂತೆ ಕೋರಿದ್ದಾರೆ.

ಹಾಸನ- ಬೇಲೂರು- ಶೃಂಗೇರಿ ಹೊಸ ರೈಲು ಮಾರ್ಗ, ಬೀದರ್ - ನಾಂದೇಡ್ ರೈಲು ಮಾರ್ಗಕ್ಕೆ ಅನುಮೋದನೆ, ಕರ್ನಾಟಕದಲ್ಲಿ ರೈಲ್ವೆ ಪೊಲೀಸ್ ಬಲವರ್ಧನೆ ಸೇರಿದಂತೆ ರಾಜ್ಯದ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಪಿಯೂಷ್ ಗೋಯಲ್ ಅವರ ಜೊತೆ ಯಡಿಯೂರಪ್ಪ ಚರ್ಚೆ ನಡೆಸಿದ್ದಾರೆ.

ಕೇಂದ್ರ ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ್ ಜೋಷಿ, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ, ಶಾಸಕರಾದ ಜಗದೀಶ್ ಶೆಟ್ಟರ್, ಆರ್. ಅಶೋಕ್ , ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್!

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್, ನದಿ ಪಾತ್ರದಲ್ಲಿ ಕಟ್ಟೆಚ್ಚರ

ನಿನ್ನ ತಲೆ ಕಡಿತೀವಿ: ಈದ್ ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆ, ಹಿಂದೂ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

‘ಯಾರು ಏನು ಧರಿಸಬೇಕು ಎಂಬುದನ್ನು ಕೋರ್ಟ್‌ ನಿರ್ಧರಿಸಬಾರದು’: ಹಿಜಾಬ್‌ ವಿವಾದದ ಕುರಿತು BJP ನಾಯಕ Syed Zafar Islam ಆಕ್ಷೇಪ

ನೇಪಾಳದಲ್ಲಿ ಭೀಕರ ಹಠಾತ್ ಪ್ರವಾಹ: ರಕ್ಕಸ ಅಲೆಗೆ ವಲಸೆ ಕಚೇರಿಯಲ್ಲಿದ್ದ ಇಶಾ ಫೌಂಡೇಶನ್‌ನ 77 ಮಂದಿ ಕಣ್ಮರೆ; Video ಹಂಚಿಕೊಂಡ ಸದ್ಗುರು! ಹೇಳಿದ್ದೇನು?