ದೇಶ

ಮಾಜಿ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಗಂಭೀರ: ಏಮ್ಸ್ ಗೆ ರಾಷ್ಟ್ರಪತಿ ಕೋವಿಂದ್ ಭೇಟಿ

Raghavendra Adiga

ನವದೆಹಲಿ: ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿಯವರ  ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಿ  ಜೇಟ್ಲಿಯವರ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಿದರು.

ಅರುಣ್ ಜೇಟ್ಲಿಆಗಸ್ಟ್ 9 ರಿಂದ ದೆಹಲಿಯ ಏಮ್ಸ್ ಆಸ್ಪತ್ರೆ ಐಸಿಯುನಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ರಾಷ್ಟ್ರಪತಿಗಳ ಏಮ್ಸ್ ಭೇಟಿ ವೇಳೆ ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಮತ್ತು ಆರೋಗ್ಯ ಇಲಾಖೆ ರಾಜ್ಯ ಸಚಿವೆ  ಅಶ್ವಿನಿ ಚೌಬೆ ಸಾಥ್ ನೀಡಿದ್ದಾರೆ.

ಮೂಲಗಳ ಪ್ರಕಾರ, 66 ವರ್ಷದ ಜೇಟ್ಲಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಆಗಸ್ಟ್ 9 ರಿಂದ ಜೇಟ್ಲಿಯ ಆರೋಗ್ಯ ಸ್ಥಿತಿಯ ಬಗ್ಗೆ ಏಮ್ಸ್ ಯಾವುದೇ ಬುಲೆಟಿನ್ ನೀಡಿಲ್ಲ, ಅವರು ಉಸಿರಾಟ ಮತ್ತು ಹೃದಯದ ಬಡಿತದ ಕುರಿತು ದೂರಿತ್ತ ಬಳಿಕ ಅವರನ್ನು ಏಮ್ಸ್ ಗೆ ದಾಖಲಿಸಲಾಯಿತು

ಕಳೆದ ಶನಿವಾರ, ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಏಮ್ಸ್ ಗೆ ಭೇಟಿ ನೀಡಿ ಜೇಟ್ಲಿಯ ಆರೋಗ್ಯದ ಬಗ್ಗೆ ವಿಚಾರಿಸಿದಾಗ, ಮಾಜಿ ಸಚಿವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಅವರ ಕಚೇರಿ ತಿಳಿಸಿತ್ತು.

ವೃತ್ತಿಯಲ್ಲಿ ವಕೀಲರಾದ ಜೇಟ್ಲಿ, ಬಿಜೆಪಿ ಸರ್ಕಾರದ ಮೊದಲ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸಂಪುಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

SCROLL FOR NEXT