ಸಾಂದರ್ಭಿಕ ಚಿತ್ರ 
ದೇಶ

ದೆಹಲಿ: ಗಾಳಿಪಟ ದಾರ ಕುತ್ತಿಗೆಗೆ ಸಿಲುಕಿ ವ್ಯಕ್ತಿ ಸಾವು 

ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿರುವಾಗ ನಿಷೇಧಿತ ಚೀನಾ ಮಾಂಜಾ(ಗಾಳಿಪಟದ ದಾರ) ಗಂಟಲಿಗೆ ಸಿಲುಕಿ 32 ವರ್ಷದ ವ್ಯಕ್ತಿಯೊಬ್ಬ ಸಾವಿಗೀಡಾದ ಘಟನೆ ನಡೆದಿದೆ. 

ನವದೆಹಲಿ: ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿರುವಾಗ ನಿಷೇಧಿತ ಚೀನಾ ಮಾಂಜಾ(ಗಾಳಿಪಟದ ದಾರ) ಕುತ್ತಿಗೆಗೆ ಸಿಲುಕಿ 32 ವರ್ಷದ ವ್ಯಕ್ತಿಯೊಬ್ಬರು ಸಾವಿಗೀಡಾದ ಘಟನೆ ನಡೆದಿದೆ.


ಮೊನ್ನೆ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ದಿನ ಈ ಘಟನೆ ನಡೆದಿದೆ. ದೆಹಲಿಯ ಬುದ್ಧ ವಿಹಾರದ ಮಾನವ್ ಶರ್ಮಾ ಎಂದು ಮೃತಪಟ್ಟ ವ್ಯಕ್ತಿಯನ್ನು ಗುರುತಿಸಲಾಗಿದೆ. 


ಮೊನ್ನೆ ರಕ್ಷಾ ಬಂಧನ ದಿನ ತನ್ನ ಸೋದರಿಯನ್ನು ಭೇಟಿ ಮಾಡಲೆಂದು ಮಾನವ್ ಶರ್ಮಾ ಪಶ್ಚಿಮ್ ವಿಹಾರಕ್ಕೆ ತೆರಳಿದ್ದರು. ದಾರಿಯಲ್ಲಿ ಸ್ಕೂಟರ್ ನಲ್ಲಿ ಹೋಗುತ್ತಿರುವಾಗ ಮರದಲ್ಲಿ ನೇತಾಡಿಕೊಂಡಿದ್ದ ಗಾಳಿಪಟದ ದಾರ ಕೊರಳಿಗೆ ಸಿಲುಕಿ ಹರಿತವಾಗಿದ್ದರಿಂದ ಗಂಟಲು ಮುರಿದಿದೆ. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಲಾಯಿತಾದರೂ ಬದುಕುಳಿಯಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.


ಮೊನ್ನೆ ಗುರುವಾರ ಇಂತಹ ನಿಷೇಧಿತ ಚೀನಾ ಮಾಂಜಾ ಗಾಳಿಪಟದ ದಾರ ಸಿಲುಕಿ ಇತರ ಎಂಟು ಮಂದಿ ಗಾಯಗೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ 9 ಮಂದಿ ವಿರುದ್ಧ ಕೇಸು ದಾಖಲಿಸಲಾಗಿದೆ.


ಗ್ಲಾಸ್ ಲೇಪಿತ ಗಾಳಿಪಟ ಬಳಕೆ ಮನುಷ್ಯರು, ಪ್ರಾಣಿ ಮತ್ತು ಪಕ್ಷಿಗಳಿಗೆ ಅಪಾಯವಾಗಿದ್ದು ಅದಕ್ಕೆ ದೇಶಾದ್ಯಂತ ನಿಷೇಧ ಹೇರಿ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಆದೇಶ ನೀಡಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT