ಬಿಜೆಪಿ ಸೇರಿದ ದೆಹಲಿ ಮಾಜಿ ಸಚಿವ ಕಪಿಲ್ ಮಿಶ್ರಾ 
ದೇಶ

ಎಎಪಿ ತೊರೆದು ಬಿಜೆಪಿ ಸೇರಿದ ದೆಹಲಿ ಮಾಜಿ ಸಚಿವ ಕಪಿಲ್ ಮಿಶ್ರಾ

ಇತ್ತೀಚಿನ ದಿನಗಳಲ್ಲಿ ಇತರೆ ಪಕ್ಷಗಳಿಂದ ಬಿಜೆಪಿಗೆ ವಲಸೆ ಹೋಗುವ ಪರಿಪಾಠ ಹೆಚ್ಚಾಗುತ್ತಿದೆ ಈಗ ದೆಹಲಿಗೂ ಈ ಚಾಳಿ ಅವರಿಸಿಕೊಂಡಿದ್ದು ಕರವಾಲ್ ನಗರದ ಮಾಜಿ ಎಎಪಿ ಶಾಸಕ ಕಪಿಲ್ ಮಿಶ್ರಾ ಶನಿವಾರ ಪಕ್ಷ ತೊರೆದು ಬಿಜೆಪಿ ಸೇರಿದ್ದಾರೆ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಇತರೆ ಪಕ್ಷಗಳಿಂದ ಬಿಜೆಪಿಗೆ ವಲಸೆ ಹೋಗುವ ಪರಿಪಾಠ ಹೆಚ್ಚಾಗುತ್ತಿದೆ ಈಗ ದೆಹಲಿಗೂ ಈ ಚಾಳಿ ಅವರಿಸಿಕೊಂಡಿದ್ದು ಕರವಾಲ್ ನಗರದ ಮಾಜಿ ಎಎಪಿ ಶಾಸಕ ಕಪಿಲ್ ಮಿಶ್ರಾ ಶನಿವಾರ ಪಕ್ಷ ತೊರೆದು ಬಿಜೆಪಿ ಸೇರಿದ್ದಾರೆ

ಈ ಹಿಂದೆ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಮತ ಹಾಕಬೇಕು ಎಂದು ಹೇಳಿ ನಾಯಕರ ಕೋಪಕ್ಕೆ ಕಾರಣವಾಗಿದ್ದ ಅವರು, ದೆಹಲಿ ಬಿಜೆಪಿ ಮುಖ್ಯಸ್ಥ ಮನೋಜ್ ತಿವಾರಿ ಮತ್ತು ಪಕ್ಷದ ಮುಖಂಡ ವಿಜಯ್ ಗೋಯೆಲ್ ಅವರ ಸಮ್ಮುಖದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಕೇಸರಿ ಪಕ್ಷಕ್ಕೆ ಸೇರಿದರು.

ಇದಲ್ಲದೆ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷದ ಮಹಿಳಾ ವಿಭಾಗದ ಮುಖ್ಯಸ್ಥೆ ರಿಚಾ ಪಾಂಡೆ ಸಹ ಕಮಲ ಪಾಳಯ ಸೇರಿದ್ದಾರೆ."ನಾನು ಕಪಿಲ್ ಮಿಶ್ರಾ ಮತ್ತು ರಿಚಾ ಪಾಂಡೆ ಅವರನ್ನು ಬಿಜೆಪಿಗೆ ಸ್ವಾಗತಿಸುತ್ತೇನೆ ಮತ್ತು ಅವರು ಪ್ರಧಾನಿ ನರೇಂದ್ರ ಮೋದಿಯವರ ನೀತಿಗಳು ಮತ್ತು ದೀನ್ ದಯಾಳ್ ಉಪಾಧ್ಯಾಯ ಮತ್ತು ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ತತ್ವವನ್ನು ಅನುಸರಿಸಿ ದೆಹಲಿಗೆ ಸೇವೆ ಸಲ್ಲಿಸುತ್ತಾರೆ ಎಂದು ನಾನು ಭಾವಿಸುತ್ತೇನೆ" ಎಂದು ತಿವಾರಿ ಹೇಳಿದರು.

ದೆಹಲಿ ವಿಧಾನಸಭಾ ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಅವರು ಈ ತಿಂಗಳ ಆರಂಭದಲ್ಲಿ ಮಿಶ್ರಾ ಅವರನ್ನು ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಅನರ್ಹಗೊಳಿಸಿದ್ದರು.ಕರವಾಲ್ ಕ್ಷೇತ್ರದಿಂದ ಆಯ್ಕೆಯಾಗಿದ್ದ ಶಾಸಕ ಮಿಶ್ರಾ ತಮ್ಮ ಅನರ್ಹತೆಯನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

SCROLL FOR NEXT