7 ದಿನಗಳಲ್ಲಿ ಬಂಗಲೆಗಳಿಂದ ಹೊರ ನಡೆಯಲು 200 ಮಾಜಿ ಸಂಸದರಿಗೆ ಆದೇಶ 
ದೇಶ

7 ದಿನಗಳಲ್ಲಿ ಬಂಗಲೆಗಳಿಂದ ಹೊರ ನಡೆಯಲು 200 ಮಾಜಿ ಸಂಸದರಿಗೆ ಆದೇಶ

ಅಧಿಕಾರದಿಂದ ಇಳಿದರೂ ಸರ್ಕಾರಿ ಬಂಗಲೆಗಳಲ್ಲೇ ವಾಸಿಸುವ ಜನಪ್ರತಿನಿಧಿಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟ ಸಂದೇಶ ರವಾನಿಸಿದೆ. 

ನವದೆಹಲಿ: ಅಧಿಕಾರದಿಂದ ಇಳಿದರೂ ಸರ್ಕಾರಿ ಬಂಗಲೆಗಳಲ್ಲೇ ವಾಸಿಸುವ ಜನಪ್ರತಿನಿಧಿಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟ ಸಂದೇಶ ರವಾನಿಸಿದೆ. 

ಮಾಜಿ ಸಂಸದರು 7 ದಿನಗಳಲ್ಲಿ ಬಂಗಲೆಗಳನ್ನು ತೊರೆಯಬೇಕೆಂದು ಕೇಂದ್ರ ಸರ್ಕಾರ ಗಡುವು ವಿಧಿಸಿದ್ದು, ಲೋಕಸಭೆಯ ಸಮಿತಿ ಆದೇಶ ಹೊರಡಿಸಿದೆ. 

ಲೋಕಸಭೆಯ ಹೌಸಿಂಗ್ ಸಮಿತಿಯ ಅಧ್ಯಕ್ಷ ಸಿಆರ್ ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದು, ಮಾಜಿ ಸಂಸದರು ವಾಸಿಸುತ್ತಿರುವ ಸರ್ಕಾರಿ ಬಂಗಲೆಗಳಲ್ಲಿ ಇನ್ನು 3 ದಿನಗಳಲ್ಲಿ ವಿದ್ಯುತ್, ನೀರಿನ ಸರಬರಾಜು, ಗ್ಯಾಸ್ ಸಂಪರ್ಕ ಎಲ್ಲವನ್ನೂ ಸ್ಥಗಿತಗೊಳಿಸಲಾಗುತ್ತದೆ ಎಂದು ಹೇಳಿದ್ದಾರೆ. 

ಲೋಕಸಭೆ ವಿಸರ್ಜನೆಯಾಗಿ ಹೊಸ ಲೋಕಸಭೆ ಅಸ್ತಿತ್ವಕ್ಕೆ ಬಂದ ಒಂದು ತಿಂಗಳಲ್ಲಿ ಮಾಜಿ ಸಂಸದರು ಸರ್ಕಾರಿ ಬಂಗಲೆಗಳನ್ನು ಬಿಟ್ಟುಕೊಡಬೇಕಾಗುತ್ತದೆ. ಮೇ.25 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ 16 ನೇ ಲೋಕಸಭೆಯನ್ನು ವಿಸರ್ಜಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT