7 ದಿನಗಳಲ್ಲಿ ಬಂಗಲೆಗಳಿಂದ ಹೊರ ನಡೆಯಲು 200 ಮಾಜಿ ಸಂಸದರಿಗೆ ಆದೇಶ 
ದೇಶ

7 ದಿನಗಳಲ್ಲಿ ಬಂಗಲೆಗಳಿಂದ ಹೊರ ನಡೆಯಲು 200 ಮಾಜಿ ಸಂಸದರಿಗೆ ಆದೇಶ

ಅಧಿಕಾರದಿಂದ ಇಳಿದರೂ ಸರ್ಕಾರಿ ಬಂಗಲೆಗಳಲ್ಲೇ ವಾಸಿಸುವ ಜನಪ್ರತಿನಿಧಿಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟ ಸಂದೇಶ ರವಾನಿಸಿದೆ. 

ನವದೆಹಲಿ: ಅಧಿಕಾರದಿಂದ ಇಳಿದರೂ ಸರ್ಕಾರಿ ಬಂಗಲೆಗಳಲ್ಲೇ ವಾಸಿಸುವ ಜನಪ್ರತಿನಿಧಿಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟ ಸಂದೇಶ ರವಾನಿಸಿದೆ. 

ಮಾಜಿ ಸಂಸದರು 7 ದಿನಗಳಲ್ಲಿ ಬಂಗಲೆಗಳನ್ನು ತೊರೆಯಬೇಕೆಂದು ಕೇಂದ್ರ ಸರ್ಕಾರ ಗಡುವು ವಿಧಿಸಿದ್ದು, ಲೋಕಸಭೆಯ ಸಮಿತಿ ಆದೇಶ ಹೊರಡಿಸಿದೆ. 

ಲೋಕಸಭೆಯ ಹೌಸಿಂಗ್ ಸಮಿತಿಯ ಅಧ್ಯಕ್ಷ ಸಿಆರ್ ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದು, ಮಾಜಿ ಸಂಸದರು ವಾಸಿಸುತ್ತಿರುವ ಸರ್ಕಾರಿ ಬಂಗಲೆಗಳಲ್ಲಿ ಇನ್ನು 3 ದಿನಗಳಲ್ಲಿ ವಿದ್ಯುತ್, ನೀರಿನ ಸರಬರಾಜು, ಗ್ಯಾಸ್ ಸಂಪರ್ಕ ಎಲ್ಲವನ್ನೂ ಸ್ಥಗಿತಗೊಳಿಸಲಾಗುತ್ತದೆ ಎಂದು ಹೇಳಿದ್ದಾರೆ. 

ಲೋಕಸಭೆ ವಿಸರ್ಜನೆಯಾಗಿ ಹೊಸ ಲೋಕಸಭೆ ಅಸ್ತಿತ್ವಕ್ಕೆ ಬಂದ ಒಂದು ತಿಂಗಳಲ್ಲಿ ಮಾಜಿ ಸಂಸದರು ಸರ್ಕಾರಿ ಬಂಗಲೆಗಳನ್ನು ಬಿಟ್ಟುಕೊಡಬೇಕಾಗುತ್ತದೆ. ಮೇ.25 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ 16 ನೇ ಲೋಕಸಭೆಯನ್ನು ವಿಸರ್ಜಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!