ಗುಲಾಮ್ ನಬಿ ಆಜಾದ್ 
ದೇಶ

ಜಮ್ಮು ವಿಮಾನ ನಿಲ್ದಾಣದಲ್ಲಿ ಗುಲಾಮ್​ ನಬಿ ಆಜಾದ್​ರನ್ನು ತಡೆದು ವಾಪಸ್ ದೆಹಲಿಗೆ​ ಕಳುಹಿಸಿದ ಸರ್ಕಾರ

ಹಿರಿಯ ಕಾಂಗ್ರೆಸ್​ ನಾಯಕ ಗುಲಾಮ್​ ನಬಿ ಆಜಾದ್​ ಅವರನ್ನು ಜಮ್ಮು ವಿಮಾನ ನಿಲ್ದಾಣದಲ್ಲಿ ತಡೆದು ವಾಪಸ್​ ದೆಹಲಿಗೆ ಕಳುಹಿಸಲಾಗಿದೆ. ಈ ಮೂಲಕ ಮಾಜಿ ಮುಖ್ಯಮಂತ್ರಿಗೆ ಜಮ್ಮು ಮತ್ತು ಕಾಶ್ಮೀರ ಭೇಟಿಗೆ ಎರಡನೇ ಬಾರಿ ನಿರಾಕರಿಸಲಾಗಿದೆ.

ಜಮ್ಮು: ಹಿರಿಯ ಕಾಂಗ್ರೆಸ್​ ನಾಯಕ ಗುಲಾಮ್​ ನಬಿ ಆಜಾದ್​ ಅವರನ್ನು ಜಮ್ಮು ವಿಮಾನ ನಿಲ್ದಾಣದಲ್ಲಿ ತಡೆದು ವಾಪಸ್​ ದೆಹಲಿಗೆ ಕಳುಹಿಸಲಾಗಿದೆ. ಈ ಮೂಲಕ ಮಾಜಿ ಮುಖ್ಯಮಂತ್ರಿಗೆ ಜಮ್ಮು ಮತ್ತು ಕಾಶ್ಮೀರ ಭೇಟಿಗೆ ಎರಡನೇ ಬಾರಿ ನಿರಾಕರಿಸಲಾಗಿದೆ.

ಗುಲಾಮ್​ ನಬಿ ಆಜಾದ್​ ಅವರು ಇಂದು ಮಧ್ಯಾಹ್ನ 2.45ರ ಸುಮಾರಿಗೆ ಜಮ್ಮು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಆದರೆ ಅವರನ್ನು ವಿಮಾನ ನಿಲ್ದಾಣದಿಂದ ಹೊರಗೆ ಬರಲು ಬಿಡಲಿಲ್ಲ. ಒತ್ತಾಯಪೂರ್ವಕವಾಗಿ ಅವರನ್ನು ದೆಹಲಿಗೆ ವಾಪಸ್​ ಕಳುಹಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್​ ವಕ್ತಾರ ರವಿಂದರ್​ ಶರ್ಮಾರ ತಿಳಿಸಿದ್ದಾರೆ.

ಈ ಮೊದಲು ಆಗಷ್ಟ್ 8 ರಂದು ಗುಲಾಮ್​ ನಬಿ ಆಜಾದ್​ ಅವರನ್ನು ಶ್ರೀನಗರ ವಿಮಾನ ನಿಲ್ದಾಣದಲ್ಲಿ ತಡೆದು ವಾಪಸ್​ ಕಳುಹಿಸಲಾಗಿತ್ತು.

ಕಳೆದ 2 ವಾರಗಳಿಂದ ಗುಲಾಮ್​ ನಬಿ ಆಜಾದ್ ಅವರನ್ನು ಕಣಿವೆ ರಾಜ್ಯದಲ್ಲಿರುವ ಅವರ ಮನೆಗೆ ತೆರಳಲೂ ಅವಕಾಶ ನೀಡುತ್ತಿಲ್ಲ. ಪಕ್ಷದ ಕಚೇರಿಗೆ ಭೇಟಿ ನೀಡಲು ಅವಕಾಶ ನಿರಾಕರಿಸಲಾಗಿದೆ. ಅವರು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪ್ರಸ್ತುತ ರಾಜ್ಯಸಭೆಯ ಸದಸ್ಯರಾಗಿದ್ದಾರೆ. ಹಾಗಾಗಿ ಅವರು ಜನರನ್ನು ಭೇಟಿ ಮಾಡಿ ಅವರ ಅಭಿಪ್ರಾಯ ಸಂಗ್ರಹಿಸಲು ಇಚ್ಛಿಸುತ್ತಿದ್ದಾರೆ. ಆದರೆ ಅವರಿಗೆ ರಾಜ್ಯಕ್ಕೆ ಬರಲು ಅವಕಾಶ ನೀಡುತ್ತಿಲ್ಲ ಎಂದು ಶರ್ಮಾ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಕಣಿವೆ ರಾಜ್ಯದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಹಲವು ನಿರ್ಬಂಧಗಳನ್ನು ಹೇರಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರಿಗೆ ಕಾಶ್ಮೀರ ಭೇಟಿಗೆ ಅವಕಾಶ ನೀಡುತ್ತಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತೀ ಹೆಚ್ಚು!

Yash’s Toxic: ನೆಗೆಟಿವ್ ರಿವ್ಯೂ ನಡುವೆ 'ರೇಟಿಂಗ್' ತೆಗೆದುಹಾಕಿದ ಬುಕ್ ಮೈ ಶೋ; ನಿರೀಕ್ಷಿತ ಕಲೆಕ್ಷನ್ ಇಲ್ವಾ? ನೆಟ್ಟಿಗರಿಂದ ತರಾಟೆ!

‘ಬರೆಯೋದೊಂದು, ಶೂಟ್ ಮಾಡೋದು ಇನ್ನೊಂದು’: ಟಾಕ್ಸಿಕ್ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆ ವಿಡಿಯೋ ವೈರಲ್; ಅದಕ್ಕೇನೆ ಸಿನಿಮಾ ಹೀಗಿದೆ ಎಂದ ನೆಟ್ಟಿಗರು!

"RSS ನಲ್ಲಿ ಜೆನ್ ಝೀಗಳೇ ಅತಿ ದೊಡ್ಡ ಸಂಖ್ಯೆ": ಬಿಜೆಪಿ ಉಪಾಧ್ಯಕ್ಷ ರಾಮ್ ಮಾಧವ್