ಗುಲಾಮ್ ನಬಿ ಆಜಾದ್ 
ದೇಶ

ಜಮ್ಮು ವಿಮಾನ ನಿಲ್ದಾಣದಲ್ಲಿ ಗುಲಾಮ್​ ನಬಿ ಆಜಾದ್​ರನ್ನು ತಡೆದು ವಾಪಸ್ ದೆಹಲಿಗೆ​ ಕಳುಹಿಸಿದ ಸರ್ಕಾರ

ಹಿರಿಯ ಕಾಂಗ್ರೆಸ್​ ನಾಯಕ ಗುಲಾಮ್​ ನಬಿ ಆಜಾದ್​ ಅವರನ್ನು ಜಮ್ಮು ವಿಮಾನ ನಿಲ್ದಾಣದಲ್ಲಿ ತಡೆದು ವಾಪಸ್​ ದೆಹಲಿಗೆ ಕಳುಹಿಸಲಾಗಿದೆ. ಈ ಮೂಲಕ ಮಾಜಿ ಮುಖ್ಯಮಂತ್ರಿಗೆ ಜಮ್ಮು ಮತ್ತು ಕಾಶ್ಮೀರ ಭೇಟಿಗೆ ಎರಡನೇ ಬಾರಿ ನಿರಾಕರಿಸಲಾಗಿದೆ.

ಜಮ್ಮು: ಹಿರಿಯ ಕಾಂಗ್ರೆಸ್​ ನಾಯಕ ಗುಲಾಮ್​ ನಬಿ ಆಜಾದ್​ ಅವರನ್ನು ಜಮ್ಮು ವಿಮಾನ ನಿಲ್ದಾಣದಲ್ಲಿ ತಡೆದು ವಾಪಸ್​ ದೆಹಲಿಗೆ ಕಳುಹಿಸಲಾಗಿದೆ. ಈ ಮೂಲಕ ಮಾಜಿ ಮುಖ್ಯಮಂತ್ರಿಗೆ ಜಮ್ಮು ಮತ್ತು ಕಾಶ್ಮೀರ ಭೇಟಿಗೆ ಎರಡನೇ ಬಾರಿ ನಿರಾಕರಿಸಲಾಗಿದೆ.

ಗುಲಾಮ್​ ನಬಿ ಆಜಾದ್​ ಅವರು ಇಂದು ಮಧ್ಯಾಹ್ನ 2.45ರ ಸುಮಾರಿಗೆ ಜಮ್ಮು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಆದರೆ ಅವರನ್ನು ವಿಮಾನ ನಿಲ್ದಾಣದಿಂದ ಹೊರಗೆ ಬರಲು ಬಿಡಲಿಲ್ಲ. ಒತ್ತಾಯಪೂರ್ವಕವಾಗಿ ಅವರನ್ನು ದೆಹಲಿಗೆ ವಾಪಸ್​ ಕಳುಹಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್​ ವಕ್ತಾರ ರವಿಂದರ್​ ಶರ್ಮಾರ ತಿಳಿಸಿದ್ದಾರೆ.

ಈ ಮೊದಲು ಆಗಷ್ಟ್ 8 ರಂದು ಗುಲಾಮ್​ ನಬಿ ಆಜಾದ್​ ಅವರನ್ನು ಶ್ರೀನಗರ ವಿಮಾನ ನಿಲ್ದಾಣದಲ್ಲಿ ತಡೆದು ವಾಪಸ್​ ಕಳುಹಿಸಲಾಗಿತ್ತು.

ಕಳೆದ 2 ವಾರಗಳಿಂದ ಗುಲಾಮ್​ ನಬಿ ಆಜಾದ್ ಅವರನ್ನು ಕಣಿವೆ ರಾಜ್ಯದಲ್ಲಿರುವ ಅವರ ಮನೆಗೆ ತೆರಳಲೂ ಅವಕಾಶ ನೀಡುತ್ತಿಲ್ಲ. ಪಕ್ಷದ ಕಚೇರಿಗೆ ಭೇಟಿ ನೀಡಲು ಅವಕಾಶ ನಿರಾಕರಿಸಲಾಗಿದೆ. ಅವರು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪ್ರಸ್ತುತ ರಾಜ್ಯಸಭೆಯ ಸದಸ್ಯರಾಗಿದ್ದಾರೆ. ಹಾಗಾಗಿ ಅವರು ಜನರನ್ನು ಭೇಟಿ ಮಾಡಿ ಅವರ ಅಭಿಪ್ರಾಯ ಸಂಗ್ರಹಿಸಲು ಇಚ್ಛಿಸುತ್ತಿದ್ದಾರೆ. ಆದರೆ ಅವರಿಗೆ ರಾಜ್ಯಕ್ಕೆ ಬರಲು ಅವಕಾಶ ನೀಡುತ್ತಿಲ್ಲ ಎಂದು ಶರ್ಮಾ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಕಣಿವೆ ರಾಜ್ಯದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಹಲವು ನಿರ್ಬಂಧಗಳನ್ನು ಹೇರಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರಿಗೆ ಕಾಶ್ಮೀರ ಭೇಟಿಗೆ ಅವಕಾಶ ನೀಡುತ್ತಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕೊಡಿ...ಆಶೀರ್ವಾದ.. ಸಿದ್ದರಾಮಯ್ಯ ಕಾಲಿಗೆ ಬಿದ್ದ ಡಿ ಕೆ ಶಿವಕುಮಾರ್.. ಪರಸ್ಪರ ಆಲಿಂಗನ, ಒಟ್ಟಿಗೆ ಬ್ರೇಕ್ ಫಾಸ್ಟ್-Photos

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT