ಅಭಿನಂದನ್ ಬಂಧನದ ಹಿಂದಿದ್ದ ಪಾಕಿಸ್ತಾನದ ಕಮಾಂಡೋ ಹತ್ಯೆ! 
ದೇಶ

ಅಭಿನಂದನ್ ಬಂಧನದ ಹಿಂದಿದ್ದ ಪಾಕಿಸ್ತಾನದ ಕಮಾಂಡೋ ಹತ್ಯೆ!

ಬಾಲಾಕೋಟ್ ನಲ್ಲಿ ಭಾರತೀಯ ವಾಯುಪಡೆ ಸರ್ಜಿಕಲ್ ಸ್ಟ್ರೈಕ್ ನಡೆಸಿದ ಬಳಿಕ ಯೋಧ ಅಭಿನಂದನ್ ನ್ನು ವಶಕ್ಕೆ ಪಡೆಯುವುದರ ಹಿಂದಿದ್ದ ಪಾಕಿಸ್ತಾನದ ಕಮಾಂಡೋ ಹತ್ಯೆಯಾಗಿದ್ದಾನೆ.

ಶ್ರೀನಗರ: ಬಾಲಾಕೋಟ್ ನಲ್ಲಿ ಭಾರತೀಯ ವಾಯುಪಡೆ ಸರ್ಜಿಕಲ್ ಸ್ಟ್ರೈಕ್ ನಡೆಸಿದ ಬಳಿಕ ಯೋಧ ಅಭಿನಂದನ್ ನ್ನು ವಶಕ್ಕೆ ಪಡೆಯುವುದರ ಹಿಂದಿದ್ದ ಪಾಕಿಸ್ತಾನದ ಕಮಾಂಡೋ ಹತ್ಯೆಯಾಗಿದ್ದಾನೆ.

ಭಾರತೀಯ ಪಡೆ ಗಡಿ ನಿಯಂತ್ರಣ ರೇಖೆ ಬಳಿ ನಡೆಸಿದ ಗುಂಡಿನ ಚಕಮಕಿಯಲ್ಲಿ ಗುಂಡೇಟಿಗೆ ಪಾಕಿಸ್ತಾನದ ಕಮಾಂಡೋ ಬಲಿಯಾಗಿದ್ದಾನೆ. ಈತ ಅಭಿನಂದನ್ ಬಂಧನದ ಹಿಂದಿದ್ದ ವ್ಯಕ್ತಿಯಾಗಿದ್ದಾನೆ.

ಪಾಕಿಸ್ತಾನದ ಸೇನೆಯ ವಿಶೇಷ ಸೇವಾ ಗುಂಪಿನಲ್ಲಿ ಸುಬೇದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಹ್ಮದ್ ಖಾನ್ ಅತಿಕ್ರಮಣಕಾರರಿಗೆ ಸಹಕರಿಸುತ್ತಿದ್ದಾಗ ನಕ್ಯಾಲ್ ಸೆಕ್ಟರ್ ನಲ್ಲಿ ಭಾರತೀಯ ಪಡೆ ಗುಂಡಿಕ್ಕಿ ಹತ್ಯೆ ಮಾಡಿದೆ. 

ಅಹ್ಮದ್ ಖಾನ್ ನೌಶೆರಾ ಸುಂದರ್ ಬಾನಿ ಹಾಗೂ ಪಲ್ಲಾನ್ ವಾಲಾ ಸೆಕ್ಟರ್ ಗಳಲ್ಲಿ ಭಾರತದೊಳಗೆ ಅತಿಕ್ರಮಣ ಮಾಡುವವರಿಗೆ ಸಹಕರಿಸುತ್ತಿದ್ದ ಮಾಹಿತಿ ಸೇನಾ ಮೂಲಗಳಿಂದ ತಿಳಿದುಬಂದಿದೆ. 

ಉತ್ತಮ ತರಬೇತಿ ಪಡೆದಿದ್ದ ಜೈಶ್-ಎ-ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆಯವರಿಗೆ ಭಾರತದೊಳಗೆ ನುಸುಳಲು ಅಹ್ಮದ್ ಖಾನ್ ಸಹಕರಿಸುತ್ತಿದ್ದ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT