ಬಿಪಿನ್ ರಾವತ್ 
ದೇಶ

ಬಾಲಕೋಟ್ ವಾಯುದಾಳಿ ನಂತರ ಪಾಕ್ ಮೇಲೆ ದಾಳಿಗೆ ಭಾರತೀಯ ಸೇನೆ ಸಜ್ಜಾಗಿತ್ತು: ಬಿಪಿನ್ ರಾವತ್‌

ಫೆಬ್ರವರಿ 26 ರಂದು ನಡೆಸಿದ ಬಾಲಕೋಟ್ ವಾಯುದಾಳಿಗೆ ಉತ್ತರವಾಗಿ ಪಾಕಿಸ್ತಾನ ಸೇನೆಯು ನಡೆಸುವ ಯಾವುದೇ ಯತ್ನವನ್ನು ವಿಫಲಗೊಳಿಸಲು ತಾವು ಸಿದ್ಧ ಎಂದು ಭಾರತೀಯ ಸೇನೆಯು ಕೇಂದ್ರ ಸರ್ಕಾರಕ್ಕೆ ಭರವಸೆ ನೀಡಿತ್ತು.

ನವದೆಹಲಿ: ಫೆಬ್ರವರಿ 26 ರಂದು ನಡೆಸಿದ ಬಾಲಕೋಟ್ ವಾಯುದಾಳಿಗೆ ಉತ್ತರವಾಗಿ ಪಾಕಿಸ್ತಾನ ಸೇನೆಯು ನಡೆಸುವ ಯಾವುದೇ ಯತ್ನವನ್ನು ವಿಫಲಗೊಳಿಸಲು ತಾವು ಸಿದ್ಧ ಎಂದು ಭಾರತೀಯ ಸೇನೆಯು ಕೇಂದ್ರ ಸರ್ಕಾರಕ್ಕೆ ಭರವಸೆ ನೀಡಿತ್ತು.

ಪುಲ್ವಾಮಾ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತೀಯ ವಾಯುಪಡೆ(ಐಎಎಫ್), ಪಾಕಿಸ್ತಾನದ ಭೂಪ್ರದೇಶದೊಳಗೆ ಪ್ರವೇಶಿಸಿ ಬಾಲಕೋಟ್ ಬಳಿಯ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆ ತರಬೇತಿ ಶಿಬಿರವನ್ನು ಧ್ವಂಸಗೊಳಿಸಿತ್ತು.

ನಿವೃತ್ತ ಅಧಿಕಾರಿಗಳೊಂದಿಗಿನ ಸಭೆ ಬಳಿಕ ಮಾತನಾಡಿದ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಭಾರತೀಯ ಸೇನೆಯು ಪಾಕಿಸ್ತಾನದ ಪಡೆಗಳ ದಾಳಿ ನಿಭಾಯಿಸಲು ಸಿದ್ಧವಾಗಿದೆ ಎಂದು ಹೇಳಿದರು.
 
ವೈಮಾನಿಕ ದಾಳಿಯ ನಂತರ, ಪಾಕಿಸ್ತಾನವು ಅಂತಹ ಯಾವುದೇ ವೈಮಾನಿಕ ದಾಳಿ ನಡೆದಿಲ್ಲ ಎಂದು ಮೊದಲು ನಿರಾಕರಿಸಿತು ಮತ್ತು ನಂತರ ಐಎಎಫ್ ನ ಬಾಂಬುಗಳು ತಮ್ಮ ಗುರುತು ತಪ್ಪಿ ಹತ್ತಿರದ ಅರಣ್ಯಕ್ಕೆ ಅಪ್ಪಳಿಸಿವೆ, ಮರಗಳನ್ನು ನಾಶಪಡಿಸಿದವು ಎಂದು ಹೇಳಿಕೊಂಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT