ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ 
ದೇಶ

ಐಎನ್ಎಕ್ಸ್ ಮೀಡಿಯಾ ಹಗರಣ: ಚಿದಂಬರಂ ಪ್ರತ್ಯಕ್ಷ, ಮಾಜಿ ಸಚಿವರ ಮನೆ ಪ್ರವೇಶಿಸಿದ ಸಿಬಿಐ, ಇಡಿ ಅಧಿಕಾರಿಗಳು

ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಿಬಿಐ, ಇ.ಡಿಯಿಂದ ಕಣ್ತಪ್ಪಿಸಿ ನಾಪತ್ತೆಯಾಗಿದ್ದ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಕಾಂಗ್ರೆಸ್ ಕಚೇರಿಯಲ್ಲಿ ಪ್ರತ್ಯಕ್ಷರಾಗಿದ್ದಾರೆ. ಈ ಬೆನ್ನಲ್ಲೆ ಸಿಬಿಐ, ಇಡಿ ತಂಡ ಮಾಜಿ ಕೇಂದ್ರ ಸಚಿವರ ಬಂಧನಕ್ಕೆ ಸಿದ್ಧತೆ ನಡೆಸಿದೆ. 

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಿಬಿಐ, ಇ.ಡಿಯಿಂದ ಕಣ್ತಪ್ಪಿಸಿ ನಾಪತ್ತೆಯಾಗಿದ್ದ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಕಾಂಗ್ರೆಸ್ ಕಚೇರಿಯಲ್ಲಿ ಪ್ರತ್ಯಕ್ಷರಾಗಿದ್ದಾರೆ. ಈ ಬೆನ್ನಲ್ಲೆ ಸಿಬಿಐ, ಇಡಿ ತಂಡ ಮಾಜಿ ಕೇಂದ್ರ ಸಚಿವರ ಬಂಧನಕ್ಕೆ ಸಿದ್ಧತೆ ನಡೆಸಿದೆ. 

ಇತ್ತೀಚಿನ ವರದಿಯ ಪ್ರಕಾರ ಚಿದಂಬರಂ ಅವರನ್ನು ಬಂಧಿಸಲು ಸಿಬಿಐ ಹಾಗೂ ಇ.ಡಿ ಅಧಿಕಾರಿಗಳು ಪೊಲೀಸರ ನೆರವಿನೊಂದಿಗೆ ಚಿದಂಬರಂ ಅವರ ಮನೆಯೊಳಗೆ ಹಿಂಬಾಗಿಲ ಮೂಲಕ ಪ್ರವೇಶಿಸಿದ್ದಾರೆ. 

ಇದಕ್ಕೂ ಮುನ್ನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದ ಚಿದಂಬರಂ, ತಮ್ಮ ವಿರುದ್ಧ ಕೇಳಿಬಂದಿದ್ದ ಕಾನೂನಿನಿಂದ ಕಣ್ತಪ್ಪಿಸಿಕೊಂಡಿರುವ ಆರೋಪವನ್ನು ಅಲ್ಲಗಳೆದಿದ್ದಾರೆ. "ನಾನು ಕಾನೂನಿನಿಂದ ತಲೆಮರೆಸಿಕೊಂಡಿರಲಿಲ್ಲ. ಆದರೆ ಕಾನೂನಿನಿಂದ ರಕ್ಷಣೆ ಪಡೆಯಲು ಮುಂದಾಗಿದ್ದೆ ಎಂದು ಹೇಳಿದ್ದರು. ಚಿದಂಬರಂ ಗೆ ಬಂಧನದಿಂದ ರಕ್ಷಣೆ ನೀಡುವುದಕ್ಕೆ ನಿರಾಕರಿಸಿದ್ದ ಸುಪ್ರೀಂ ಕೋರ್ಟ್ ನ ಎನ್ ವಿ ರಮಣ ನೇತೃತ್ವದ ಪೀಠ, ಅರ್ಜಿಯ ತುರ್ತು ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾವಣೆ ಮಾಡಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT