ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ 
ದೇಶ

ಐಎನ್ಎಕ್ಸ್ ಮೀಡಿಯಾ ಹಗರಣ: ಚಿದಂಬರಂ ಪ್ರತ್ಯಕ್ಷ, ಮಾಜಿ ಸಚಿವರ ಮನೆ ಪ್ರವೇಶಿಸಿದ ಸಿಬಿಐ, ಇಡಿ ಅಧಿಕಾರಿಗಳು

ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಿಬಿಐ, ಇ.ಡಿಯಿಂದ ಕಣ್ತಪ್ಪಿಸಿ ನಾಪತ್ತೆಯಾಗಿದ್ದ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಕಾಂಗ್ರೆಸ್ ಕಚೇರಿಯಲ್ಲಿ ಪ್ರತ್ಯಕ್ಷರಾಗಿದ್ದಾರೆ. ಈ ಬೆನ್ನಲ್ಲೆ ಸಿಬಿಐ, ಇಡಿ ತಂಡ ಮಾಜಿ ಕೇಂದ್ರ ಸಚಿವರ ಬಂಧನಕ್ಕೆ ಸಿದ್ಧತೆ ನಡೆಸಿದೆ. 

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಿಬಿಐ, ಇ.ಡಿಯಿಂದ ಕಣ್ತಪ್ಪಿಸಿ ನಾಪತ್ತೆಯಾಗಿದ್ದ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಕಾಂಗ್ರೆಸ್ ಕಚೇರಿಯಲ್ಲಿ ಪ್ರತ್ಯಕ್ಷರಾಗಿದ್ದಾರೆ. ಈ ಬೆನ್ನಲ್ಲೆ ಸಿಬಿಐ, ಇಡಿ ತಂಡ ಮಾಜಿ ಕೇಂದ್ರ ಸಚಿವರ ಬಂಧನಕ್ಕೆ ಸಿದ್ಧತೆ ನಡೆಸಿದೆ. 

ಇತ್ತೀಚಿನ ವರದಿಯ ಪ್ರಕಾರ ಚಿದಂಬರಂ ಅವರನ್ನು ಬಂಧಿಸಲು ಸಿಬಿಐ ಹಾಗೂ ಇ.ಡಿ ಅಧಿಕಾರಿಗಳು ಪೊಲೀಸರ ನೆರವಿನೊಂದಿಗೆ ಚಿದಂಬರಂ ಅವರ ಮನೆಯೊಳಗೆ ಹಿಂಬಾಗಿಲ ಮೂಲಕ ಪ್ರವೇಶಿಸಿದ್ದಾರೆ. 

ಇದಕ್ಕೂ ಮುನ್ನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದ ಚಿದಂಬರಂ, ತಮ್ಮ ವಿರುದ್ಧ ಕೇಳಿಬಂದಿದ್ದ ಕಾನೂನಿನಿಂದ ಕಣ್ತಪ್ಪಿಸಿಕೊಂಡಿರುವ ಆರೋಪವನ್ನು ಅಲ್ಲಗಳೆದಿದ್ದಾರೆ. "ನಾನು ಕಾನೂನಿನಿಂದ ತಲೆಮರೆಸಿಕೊಂಡಿರಲಿಲ್ಲ. ಆದರೆ ಕಾನೂನಿನಿಂದ ರಕ್ಷಣೆ ಪಡೆಯಲು ಮುಂದಾಗಿದ್ದೆ ಎಂದು ಹೇಳಿದ್ದರು. ಚಿದಂಬರಂ ಗೆ ಬಂಧನದಿಂದ ರಕ್ಷಣೆ ನೀಡುವುದಕ್ಕೆ ನಿರಾಕರಿಸಿದ್ದ ಸುಪ್ರೀಂ ಕೋರ್ಟ್ ನ ಎನ್ ವಿ ರಮಣ ನೇತೃತ್ವದ ಪೀಠ, ಅರ್ಜಿಯ ತುರ್ತು ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾವಣೆ ಮಾಡಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT