ಭಾರತೀಯ ರೈಲ್ವೆ 
ದೇಶ

ರೈಲು ಪ್ರಯಾಣಿಕರ ಗಮನಕ್ಕೆ: ಸಿಂಗಲ್ ಯೂಸ್ ಪ್ಲ್ಯಾಸ್ಟಿಕ್ ಗೆ ಬ್ರೇಕ್, ನೀರಿನ ಬಾಟಲ್ ನ್ನು ಇಲಾಖೆಗೇ ಹಿಂತಿರುಗಿಸಬೇಕು!

ಪ್ಲ್ಯಾಸ್ಟಿಕ್ ಬಳಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರೈಲ್ವೆ ಸಚಿವಾಲಯ ಮಹತ್ವದ ಹೆಜ್ಜೆ ಇಟ್ಟಿದ್ದು, ಸಿಂಗಲ್ ಯೂಸ್ ಪ್ಲ್ಯಾಸ್ಟಿಕ್ ಗೆ ಬ್ರೇಕ್ ಹಾಕುವುದಕ್ಕೆ ಮುಂದಾಗಿದೆ. 

ನವದೆಹಲಿ: ಪ್ಲ್ಯಾಸ್ಟಿಕ್ ಬಳಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರೈಲ್ವೆ ಸಚಿವಾಲಯ ಮಹತ್ವದ ಹೆಜ್ಜೆ ಇಟ್ಟಿದ್ದು, ಸಿಂಗಲ್ ಯೂಸ್ ಪ್ಲ್ಯಾಸ್ಟಿಕ್ ಗೆ ಬ್ರೇಕ್ ಹಾಕುವುದಕ್ಕೆ ಮುಂದಾಗಿದೆ. 

ಅ.2 ರಿಂದ 50 ಮೈಕ್ರೋನ್ ಗಿಂತ ಕಡಿಮೆ ದಪ್ಪ ಇರುವ ಪ್ಲ್ಯಾಸ್ಟಿಕ್ ವಸ್ತುಗಳ ಸಿಂಗಲ್ ಯೂಸ್ ಗೆ  ನಿಷೇಧ ವಿಧಿಸುವ ಬಗ್ಗೆ ಎಲ್ಲಾ ರೈಲ್ವೆ ಯುನಿಟ್ ಗಳಿಗೂ ನಿರ್ದೇಶನ ನೀಡಿದೆ. ಅ.2 ರಿಂದ ದೇಶಾದ್ಯಂತ ಸಿಂಗಲ್ ಯೂಸ್ ಪ್ಲ್ಯಾಸ್ಟಿಕ್ ನ್ನು ತ್ಯಜಿಸಲು ಪ್ರಧಾನಿ ನರೇಂದ್ರ ಮೋದಿ ಆ.15 ರ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ದೇಶದ ಜನತೆಗೆ ಕರೆ ನೀಡಿದ್ದರು.  ಈ ಬೆನ್ನಲ್ಲೇ ರೈಲ್ವೆ ಸಚಿವಾಲಯ ಕ್ರಮ ಕೈಗೊಂಡಿದೆ. 

ರೈಲ್ವೆ ಸಚಿವಾಲಯ ನಿರ್ದೇಶನದ ಪ್ರಕಾರ ಇನ್ನು ಮುಂದಿನ ದಿನಗಳಲ್ಲಿ ರೈಲ್ವೆ ವೆಂಡರ್ ಗಳು ಪ್ಲ್ಯಾಸ್ಟಿಕ್ ಕ್ಯಾರಿ ಬ್ಯಾಗ್ ಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಪ್ಲಾಸ್ಟಿಕ್ ಉತ್ಪನ್ನಗಳ ರೆಡ್ಯೂಸ್, ರೀಯೂಸ್, ರೆಫ್ಯೂಸ್ ಎಂಬ ಸೂತ್ರ ಅಳವಡಿಸಿಕೊಂಡು ಪ್ಲ್ಯಾಸ್ಟಿಕ್ ಮುಕ್ತ ಇಲಾಖೆಯನ್ನಾಗಿ ಮಾಡುವುದು ರೈಲ್ವೆಯ ಉದ್ದೇಶ. 

ಪ್ಲ್ಯಾಸ್ಟಿಕ್ ಬಳಕೆಗೆ ಕಡಿವಾಣ ಹಾಕುವುದಕ್ಕೆ ಪೂರಕ ವಾತಾವರಣ ನಿರ್ಮಿಸಲು ಐಆರ್ ಸಿಟಿಸಿ ಹಲವು ಸೌಲಭ್ಯಗಳನ್ನೂ ನೀಡಲಿದ್ದು, ಗ್ರಾಹಕರು  ಕುಡಿಯುವ ನೀರಿಬ ಬಾಟಲ್ ಗಳು, ಪ್ಲ್ಯಾಸ್ಟಿಕ್ ವಸ್ತುಗಳನ್ನು ಹಿಂತಿರುಗಿಸುವ ವ್ಯವಸ್ಥೆಯನ್ನು ಜಾರಿಗೊಳಿಸಿ, ಪ್ಲ್ಯಾಸ್ಟಿಕ್ ಬಾಟಲ್ ಕ್ರಶಿಂಗ್ ಯಂತ್ರವನ್ನು ನೀಡಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT