ಚಿದಂಬರಂ ಬಂಧನ 
ದೇಶ

ಐಎನ್ ಎಕ್ಸ್ ಮೀಡಿಯಾ ಹಗರಣ: ಹೈಡ್ರಾಮಾ ನಡುವೆ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಬಂಧನ

ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಬಂಧನವಾಗಿದೆ. 

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಬಂಧನವಾಗಿದೆ. 

24 ಗಂಟೆಗಳ ನಾಪತ್ತೆ ನಂತರ ಕಾಂಗ್ರೆಸ್ ಕಚೇರಿಯಲ್ಲಿ ಪ್ರತ್ಯಕ್ಷರಾಗಿದ್ದ ಚಿದಂಬರಂ ಅವರ ದೆಹಲಿ ನಿವಾಸಕ್ಕೆ ತೆರಳಿದ ಸಿಬಿಐ ಅಧಿಕಾರಿಗಳು ಚಿದಂಬರಂ ಅವರನ್ನು ಬಂಧಿಸಿದ್ದಾರೆ. 

ಸುದ್ದಿಗೋಷ್ಠಿಯ ನಂತರ ಸಿಬಿಐ, ಇಡಿ ಅಧಿಕಾರಿಗಳು ಪೊಲೀಸರ ನೆರವಿನಿಂದ ಚಿದಂಬರಂ ಅವರ ಮನೆಯನ್ನು ಪ್ರವೇಶಿಸಿದ್ದರು. ಈ ಬಳಿಕ ಚಿದಂಬರಂ ಅವರನ್ನು ಸಿಬಿಐ ನ ಕೇಂದ್ರ ಕಚೇರಿಗೆ ಕರೆದೊಯ್ದು, ವಾರೆಂಟ್ ನೀಡಿ ಅಧಿಕೃತವಾಗಿ ಬಂಧಿಸಿದ್ದಾರೆ. ಆ.22 ರಂದು ಚಿದಂಬರಂ ಅವರನ್ನು ಸಿಬಿಐ ನ್ಯಾಯಾಲಯದ ಎದುರು ಹಾಜರುಪಡಿಸುವ ಸಾಧ್ಯತೆ ಇದೆ. 

ಬಂಧನಕ್ಕೂ ಮುನ್ನ ಚಿದಂಬರಂ ನಿವಾಸದ ಬಳಿ ಹೈಡ್ರಾಮ 

ಸಿಬಿಐ ಅಧಿಕಾರಿಗಳು ಚಿದಂಬರಂ ಅವರನ್ನು ವಶಕ್ಕೆ ಪಡೆಯುವುದಕ್ಕೂ ಮುನ್ನ ಹೈಡ್ರಾಮ ನಡೆದಿದೆ, ಸಿಬಿಐ ಅಧಿಕಾರಿಗಳು ಚಿದಂಬರಂ ಮನೆಗೆ ಪ್ರವೇಶಿಸಲು ಯತ್ನಿಸುತ್ತಿದ್ದಂತೆಯೇ ಗಲಾಟೆ ಪ್ರಾರಂಭವಾಗಿದ್ದು, ಪೊಲೀಸ್ ಅಧಿಕಾರಿಗಳ ನೆರವಿನಿಂದ ಸಿಬಿಐ ಅಧಿಕಾರಿಗಳು  ಹಿಂಬಾಗಿಲಿನ ಮೂಲಕ ಚಿದಂಬರಂ ಮನೆ ಪ್ರವೇಶಿಸಿದ್ದಾರೆ. ಮನೆಗೆ ಪ್ರವೇಶಿಸುತ್ತಿದ್ದಂತೆಯೇ ಸಿಬಿಐ ವಕೀಲರ ನೇತೃತ್ವದಲ್ಲಿ ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸಿ ಚಿದಂಬರಂ ಅವರನ್ನು ವಶಕ್ಕೆ ಪಡೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!