ಚಿದಂಬರಂ ಬಂಧನ 
ದೇಶ

ಐಎನ್ ಎಕ್ಸ್ ಮೀಡಿಯಾ ಹಗರಣ: ಹೈಡ್ರಾಮಾ ನಡುವೆ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಬಂಧನ

ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಬಂಧನವಾಗಿದೆ. 

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಬಂಧನವಾಗಿದೆ. 

24 ಗಂಟೆಗಳ ನಾಪತ್ತೆ ನಂತರ ಕಾಂಗ್ರೆಸ್ ಕಚೇರಿಯಲ್ಲಿ ಪ್ರತ್ಯಕ್ಷರಾಗಿದ್ದ ಚಿದಂಬರಂ ಅವರ ದೆಹಲಿ ನಿವಾಸಕ್ಕೆ ತೆರಳಿದ ಸಿಬಿಐ ಅಧಿಕಾರಿಗಳು ಚಿದಂಬರಂ ಅವರನ್ನು ಬಂಧಿಸಿದ್ದಾರೆ. 

ಸುದ್ದಿಗೋಷ್ಠಿಯ ನಂತರ ಸಿಬಿಐ, ಇಡಿ ಅಧಿಕಾರಿಗಳು ಪೊಲೀಸರ ನೆರವಿನಿಂದ ಚಿದಂಬರಂ ಅವರ ಮನೆಯನ್ನು ಪ್ರವೇಶಿಸಿದ್ದರು. ಈ ಬಳಿಕ ಚಿದಂಬರಂ ಅವರನ್ನು ಸಿಬಿಐ ನ ಕೇಂದ್ರ ಕಚೇರಿಗೆ ಕರೆದೊಯ್ದು, ವಾರೆಂಟ್ ನೀಡಿ ಅಧಿಕೃತವಾಗಿ ಬಂಧಿಸಿದ್ದಾರೆ. ಆ.22 ರಂದು ಚಿದಂಬರಂ ಅವರನ್ನು ಸಿಬಿಐ ನ್ಯಾಯಾಲಯದ ಎದುರು ಹಾಜರುಪಡಿಸುವ ಸಾಧ್ಯತೆ ಇದೆ. 

ಬಂಧನಕ್ಕೂ ಮುನ್ನ ಚಿದಂಬರಂ ನಿವಾಸದ ಬಳಿ ಹೈಡ್ರಾಮ 

ಸಿಬಿಐ ಅಧಿಕಾರಿಗಳು ಚಿದಂಬರಂ ಅವರನ್ನು ವಶಕ್ಕೆ ಪಡೆಯುವುದಕ್ಕೂ ಮುನ್ನ ಹೈಡ್ರಾಮ ನಡೆದಿದೆ, ಸಿಬಿಐ ಅಧಿಕಾರಿಗಳು ಚಿದಂಬರಂ ಮನೆಗೆ ಪ್ರವೇಶಿಸಲು ಯತ್ನಿಸುತ್ತಿದ್ದಂತೆಯೇ ಗಲಾಟೆ ಪ್ರಾರಂಭವಾಗಿದ್ದು, ಪೊಲೀಸ್ ಅಧಿಕಾರಿಗಳ ನೆರವಿನಿಂದ ಸಿಬಿಐ ಅಧಿಕಾರಿಗಳು  ಹಿಂಬಾಗಿಲಿನ ಮೂಲಕ ಚಿದಂಬರಂ ಮನೆ ಪ್ರವೇಶಿಸಿದ್ದಾರೆ. ಮನೆಗೆ ಪ್ರವೇಶಿಸುತ್ತಿದ್ದಂತೆಯೇ ಸಿಬಿಐ ವಕೀಲರ ನೇತೃತ್ವದಲ್ಲಿ ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸಿ ಚಿದಂಬರಂ ಅವರನ್ನು ವಶಕ್ಕೆ ಪಡೆದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT