ನೂತನ ಸಚಿವರೊಂದಿಗೆ ರಾಜ್ಯಪಾಲರು ಹಾಗೂ ಸಿಎಂ 
ದೇಶ

ಯೋಗಿ ಆದಿತ್ಯನಾಥ್ ಸಂಪುಟ ಪುನರ್ ರಚನೆ: ಸಚಿವರಾಗಿ 23 ಶಾಸಕರು ಪ್ರಮಾಣ

ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಸುಮಾರು ಎರಡೂವರೆ ವರ್ಷಗಳ ನಂತರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಮೊದಲ ಬಾರಿಗೆ ಸಂಪುಟ ಪುನರ್ರಚನೆ ಮಾಡಿದ್ದು, 23 ಹೊಸ ಶಾಸಕರಿಗೆ ಮಂತ್ರಿ ಭಾಗ್ಯ ನೀಡಿದ್ದಾರೆ.

ಲಖನೌ: ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಸುಮಾರು ಎರಡೂವರೆ ವರ್ಷಗಳ ನಂತರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಮೊದಲ ಬಾರಿಗೆ ಸಂಪುಟ ಪುನರ್ರಚನೆ ಮಾಡಿದ್ದು, 23 ಹೊಸ ಶಾಸಕರಿಗೆ ಮಂತ್ರಿ ಭಾಗ್ಯ ನೀಡಿದ್ದಾರೆ.

ಇಂದು ರಾಜಭವನದಲ್ಲಿ 23 ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರು ನೂತನ ಸಚಿವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

6 ಶಾಸಕರು ಸಂಪುಟ ದರ್ಜೆ ಸಚಿವರಾಗಿ,  6 ಶಾಸಕರು ರಾಜ್ಯ ಸ್ವತಂತ್ರ ಪ್ರಭಾರ ಸಚಿವರಾಗಿ ಮತ್ತು 11 ಶಾಸಕರು ರಾಜ್ಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಇಂದು ಯೋಗಿ ಆದಿತ್ಯನಾಥ್ ಸಂಪುಟ ಸೇರಿದ ಬಹುತೇಕ ಶಾಸಕರು ಮೊದಲ ಬಾರಿ ಸಚಿವರಾಗಿದ್ದು, ಆಡಳಿತಾತ್ಮಕ ಅನುಭವ ಹೊಂದಿಲ್ಲ.

ಇನ್ನು ನಾಲ್ವರು ರಾಜ್ಯ ಖಾತೆ ಸಚಿವರಿಗೆ ಸಂಪುಟ ದರ್ಜೆ ಸಚಿವರಾಗಿ ಬಡ್ತಿ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಕ್ಷಾಂತರ ಊಹಾಪೋಹಗಳ ನಡುವೆ ಶಿವಸೇನೆ(ಯುಬಿಟಿ) ಸಂಸದರಿಂದ ಲೋಕಸಭಾ ಸ್ಪೀಕರ್ ಭೇಟಿ; ಓಂ ಬಿರ್ಲಾ ಹೇಳಿದ್ದೇನು?

ಭಾರತದಲ್ಲಿ Telegram ತಾತ್ಕಾಲಿಕ ನಿಷೇಧ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ CEO ಪಾವೆಲ್; ಕೇಂದ್ರದ ವಿರುದ್ಧ ಕಿಡಿ

ನನ್ನ ಹೋರಾಟ ಸೌಜನ್ಯ ಸಾವಿನ ವಿರುದ್ಧ; 200 ಕೋಟಿ ರೂ ತರಲು ನಾನು ಧರ್ಮಸ್ಥಳದ ವಿರೋಧಿಯೇ?: ಮಾರಿಕೊಂಡ ಮಾಧ್ಯಮಗಳು ಹೇಳಿಕೆಗೆ ಪ್ರಕಾಶ್ ರೈ ಸ್ಪಷ್ಟನೆ

ತಿಂಗಳಾಂತ್ಯಕ್ಕೆ ಸಂಪುಟ ವಿಸ್ತರಣೆ: ಜಿಎಸ್ ಪಾಟೀಲ್​ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪಾದಯಾತ್ರೆ; ಬೆಂಬಲಿಗರಿಂದ ವಿಭಿನ್ನ ಯತ್ನ!

ಶಿವಸೇನೆ (ಯುಬಿಟಿ)ಯಲ್ಲಿ ಭಿನ್ನಮತ ಸ್ಫೋಟ?: ನಮ್ಮ ಸಂಸದರಿಗೆ ತಲಾ ₹50 ಕೋಟಿ ಆಮಿಷ ಒಡ್ಡಿದ್ದಾರೆ: ಸಂಜಯ್ ರಾವುತ್ ಆರೋಪ

SCROLL FOR NEXT