ದೇಶ

ಐಎನ್‌ಎಕ್ಸ್ ಮೀಡಿಯಾ ಪ್ರಕರಣ:ಆಗಸ್ಟ್‌ 26ರವರೆಗೆ ಸಿಬಿಐ ಕಸ್ಟಡಿಗೆ ಚಿದಂಬರಂ

Raghavendra Adiga

ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನ್ನ ನಿವಾಸದಿಂದ ಬುಧವಾರ ರಾತ್ರಿ ಬಂಧಿಸಿರುವ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನು ಇಂದು ಆಗಸ್ಟ್ 26 ರವರೆಗೆವಶಕ್ಕೆ ಪಡೆದಿದೆ.


ಪಿ.ಚಿದಂಬರಂ ಅವರನ್ನು ಇಂದು ವಿಶೇಷ ಸಿಬಿಐ ನ್ಯಾಯಾಲಯದಲ್ಲಿ ಹಾಜರುಪಡಿಸಿತ್ತು. ಮೂರು ಗಂಟೆಗಳ ಕಾಲ ನಡೆದ ವಿಚಾರಣೆಯ ನಂತರ, ಯಾಲಯವು ಆಗಸ್ಟ್ 26 ರವರೆಗೆ ಕಾಂಗ್ರೆಸ್ ನಾಯಕನನ್ನು ಕೇಂದ್ರ ತನಿಖಾ ಸಂಸ್ಥೆಯ ಕಸ್ಟಡಿಗೆ ನೀಡಿತು. ಸಿಬಿಐ ವಕ್ತಾರರು ಈ ಹಿಂದೆ ಚಿದಂಬರಂ ಅವರನ್ನುನ್ಯಾಯಾಲಯ ಹೊರಡಿಸಿದ ವಾರಂಟ್‌ನ ಆಧಾರದ ಮೇಲೆ ಬಂಧಿಸಲಾಗಿದೆ ಎಂದು ಹೇಳಿದರು.

ಅವರ ಬಂಧನದ ಬಳಿಕ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯ ವೈದ್ಯರು ಸಿಬಿಐ ಕೇಂದ್ರ ಕಚೇರಿಯಲ್ಲಿ ಅವರ ವೈದ್ಯಕೀಯ ಪರೀಕ್ಷೆ ನಡೆಸಿದರು ಎಂದು ಮೂಲಗಳು ತಿಳಿಸಿವೆ

ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಬೃಹನ್ನಾಟಕದ ನಂತರ ಮಾಜಿ ಹಣಕಾಸು ಸಚಿವರ ಬಂಧನವಾಗಿದ್ದು ಗುರುವಾರ ಸಿಬಿಐ ಚಿದಂಬರಂ ಅವರನ್ನು ಐದು ದಿನಗಳ ಕಾಲ ಕಸ್ಟಡಿಗೆ ಒಪ್ಪಿಸುವಂತೆ ನ್ಯಾಯಾಲಯವನ್ನು ಕೋರಿತ್ತು.

SCROLL FOR NEXT