ಇಂದ್ರಾಣಿ ಮುಖರ್ಜಿ-ಚಿದಂಬರಂ 
ದೇಶ

ಚಿದಂಬರಂ ಬಂಧನಕ್ಕೆ ಇಂದ್ರಾಣಿ ಹೇಳಿಕೆಯೇ ಪ್ರಮುಖ ಸಾಕ್ಷಿ, ಆಧಾರ !!

ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಬಂಧನದ ಹಿಂದೆ ಶೀನಾಬೋರಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಅವರ ಹೇಳಿಕೆಯೇ ಪ್ರಮುಖ ಕಾರಣ ಎನ್ನಲಾಗಿದೆ.

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಬಂಧನದ ಹಿಂದೆ ಶೀನಾಬೋರಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಅವರ ಹೇಳಿಕೆಯೇ ಪ್ರಮುಖ ಕಾರಣ ಎನ್ನಲಾಗಿದೆ.

ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ಮತ್ತು ಇಡಿ ತನಿಖಾ ಅಧಿಕಾರಿಗಳ ಮುಂದೆ ಇಂದ್ರಾಣಿ ಮುಖರ್ಜಿ ನೀಡಿದ್ದ ಹೇಳಿಕೆಯೇ ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ನಾಯಕ ಪಿ ಚಿದಂಬರಂ ಬಂಧನಕ್ಕೆ ಪ್ರಮುಖ ಅಸ್ತ್ರ, ಆಧಾರ, ಸಾಕ್ಷಿಯಾಯಿತು ಎನ್ನಲಾಗಿದೆ.

ಇಂದ್ರಾಣಿ ಮುಖರ್ಜಿಮತ್ತು ಅವರ ಪತಿ ಪೀಟರ್ ಮುಖರ್ಜಿ ಅವರು ಸಿಬಿಐ ಮತ್ತು ಜಾರಿ ನಿರ್ದೇಶನಾಲಯಕ್ಕೆ ನೀಡಿದ್ದ ಹೇಳಿಕೆಯಲ್ಲಿ ಆಗಿನ ಹಣಕಾಸು ಸಚಿವ ಚಿದಂಬರಂ ಅವರನ್ನು ತಮ್ಮ ಉತ್ತರ ಬ್ಲಾಕ್ ಕಚೇರಿಯಲ್ಲಿ ಭೇಟಿಯಾಗಿದ್ದಾಗಿಯೂ ನಂತರ ಅವರ ಪುತ್ರ ಕಾರ್ತಿ ಅವರನ್ನು ಭೇಟಿಯಾಗಿ ವ್ಯವಹಾರದಲ್ಲಿ ಸಹಾಯ ಮಾಡುವಂತೆ ಮನವಿ ಮಾಡಿದ್ದ ವಿಷಯ ತಿಳಿಸಿದ್ದರು. ಇದು ಚಿದು ಬಂಧನಕ್ಕೆ ಪುಷ್ಟಿ ಕೊಟ್ಟಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪುತ್ರ ಕಾರ್ತಿಯವರನ್ನು ಬಂಧಿಸಿ ನಂತರ ಬಿಡಗಡೆ ಮಾಡಲಾಗಿದೆ.

ಇಂದ್ರಾಣಿ ಮಾಫಿ ಸಾಕ್ಷಿ
ಪ್ರಕರಣದಲ್ಲಿ ಮಾಫಿಸಾಕ್ಷಿ (ಅಪ್ರೂವರ್) ಆಗಲು ಇಂದ್ರಾಣಿ ಮುಖರ್ಜಿಗೆ ದೆಹಲಿ ಕೋರ್ಟ್ ಕಳೆದ ತಿಂಗಳು ಅನುಮತಿ ನೀಡಿತ್ತು. ಮಾಫಿಸಾಕ್ಷಿ ಆಗಿ, ಪ್ರಕರಣದ ಸಂಪೂರ್ಣ ಮಾಹಿತಿಯನ್ನು ನೀಡಿದರೆ ತಮಗೆ ಕ್ಷಮಾದಾನ ನೀಡುವಂತೆ ಕೋರ್ಟ್‌ ಗೆ ಇಂದ್ರಾಣಿ ಮನವಿ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT