ಪಿ ಚಿದಂಬರಂ 
ದೇಶ

ಉದ್ಘಾಟನೆಗೆ ಮುಖ್ಯ ಅತಿಥಿಯಾಗಿ ಹೋಗಿದ್ದ ಸಿಬಿಐ ಕಚೇರಿ ಅತಿಥಿ ಗೃಹದಲ್ಲಿ ರಾತ್ರಿಯಿಡೀ ಕಳೆದ ಪಿ.ಚಿದಂಬರಂ!

ನಿರೀಕ್ಷಣಾ ಜಾಮೀನು ದೆಹಲಿ ಹೈಕೋರ್ಟ್ ನಿಂದ ತಿರಸ್ಕೃತವಾಗುತ್ತಿದ್ದಂತೆ ಬಂಧನಕ್ಕೆ ಬೆಂಬತ್ತಿ ನಿಂತ ಸಿಬಿಐ ಅಧಿಕಾರಿಗಳ ತಂಡಕ್ಕೆ ಕೊನೆಗೂ ರಾತ್ರಿ 10 ಗಂಟೆ ಸುಮಾರಿಗೆ ಸಿಕ್ಕಿದರು ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂ. 

ನವದೆಹಲಿ: ನಿರೀಕ್ಷಣಾ ಜಾಮೀನು ದೆಹಲಿ ಹೈಕೋರ್ಟ್ ನಿಂದ ತಿರಸ್ಕೃತವಾಗುತ್ತಿದ್ದಂತೆ ಬಂಧನಕ್ಕೆ ಬೆಂಬತ್ತಿ ನಿಂತ ಸಿಬಿಐ ಅಧಿಕಾರಿಗಳ ತಂಡಕ್ಕೆ ಕೊನೆಗೂ ರಾತ್ರಿ 10 ಗಂಟೆ ಸುಮಾರಿಗೆ ಸಿಕ್ಕಿದರು ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂ.


ಅವರನ್ನು ಬಂಧಿಸಿ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಕಾರಿನಲ್ಲಿ ಸಿಬಿಐ ಕೇಂದ್ರ ಕಚೇರಿಯ ಅತಿಥಿ ಗೃಹಕ್ಕೆ ಕರೆದುಕೊಂಡು ಬರಲಾಯಿತು. ಸಿಬಿಐ ಅತಿಥಿ ಗೃಹದ ಕೆಳ ಮಹಡಿಯಲ್ಲಿ ರಾತ್ರಿಯಿಡೀ ಕಳೆದರು ಚಿದಂಬರಂ. 


ವೈರುಧ್ಯವೆಂದರೆ ಇದೇ ಕಚೇರಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಚಿದಂಬರಂ ಭಾಗಿಯಾಗಿದ್ದರು. ಕೇಂದ್ರ ಸರ್ಕಾರದಲ್ಲಿ 2008ರಿಂದ 2012ರವರೆಗೆ ಸಚಿವರಾಗಿದ್ದ ಚಿದಂಬರಂ ಅವರು ಇದೇ ಕಚೇರಿಯ ಉದ್ಘಾಟನೆಯಲ್ಲಿ ಭಾಗವಹಿಸಿದ್ದರು. ಆ ಸಮಾರಂಭ 2011ರ ಜೂನ್ 30ರಂದು ಅಂದಿನ ಪ್ರಧಾನಿ ಡಾ ಮನಮೋಹನ್ ಸಿಂಗ್ ಉಪಸ್ಥಿತಿಯಲ್ಲಿ ನೆರವೇರಿತ್ತು. ಅದಕ್ಕೆ ಚಿದಂಬರಂ ಮುಖ್ಯ ಅತಿಥಿಯಾಗಿ ಹೋಗಿದ್ದರು.


ಯುಪಿಎ ಸರ್ಕಾರದ 10 ವರ್ಷಗಳ ಆಡಳಿತಾವಧಿಯಲ್ಲಿಯೇ ಈ ಐಎನ್ಎಕ್ಸ್ ಮೀಡಿಯಾ ಅಕ್ರಮ ನಡೆಯಿತು ಎಂದು ಹೇಳಲಾಗುತ್ತಿದ್ದು ಅದರಲ್ಲಿ ಪ್ರಮುಖ ಆರೋಪಿಯಾಗಿ ಗುರುತಿಸಿಕೊಂಡಿರುವ ಚಿದಂಬರಂ ಅವರನ್ನು ನಿನ್ನೆ ದೆಹಲಿಯ ಅವರ ಜೊರ್ ಬಾಗ್ ನಿವಾಸದಿಂದ ಕಂಪೌಂಡ್ ಹಾರಿ ಹೋಗಿ ಸಿಬಿಐ ಅಧಿಕಾರಿಗಳ ತಂಡ ಬಂಧಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT