ಸುಪ್ರೀಂ ಕೋರ್ಟ್‌ 
ದೇಶ

ಹೆತ್ತವರಿಂದ ಮಕ್ಕಳ ಸಮಾನ ಪೋಷಣೆಗಾಗಿ ಸುಪ್ರೀಂಗೆ ಅರ್ಜಿ

ಮಕ್ಕಳ ಹಕ್ಕು ಉಲ್ಲಂಘನೆಯಾಗುತ್ತಿರುವ ಹಿನ್ನೆಲೆ ಪೋಷಕರಿಗೆ ಸಮಾನ ಪಾಲನೆ, ಜಂಟಿ ಹೊಣೆಗಾರಿಕೆಯನ್ನು ಅನುಷ್ಠಾನಗೊಳಿಸಬೇಕೆಂದು ಹಾಗೂ ಪೋಷಕರ ವಿಚ್ಛೇದನ ಪ್ರಕರಣಗಳಲ್ಲಿ ಸಿಲುಕಿರುವ ಮಕ್ಕಳ ಬಗ್ಗೆ ನ್ಯಾಯಾಲಯಗಳು ತಮ್ಮ ದೃಷ್ಟಿಕೋನ ಬದಲಿಸುವಂತೆ ‘ಸೇವ್ ಚೈಲ್ಡ್ ಇಂಡಿಯಾ ಫೌಂಡೇಷನ್’ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿ ಮನವಿ ಮಾಡಿದೆ 

ಬೆಂಗಳೂರು: ಮಕ್ಕಳ ಹಕ್ಕು ಉಲ್ಲಂಘನೆಯಾಗುತ್ತಿರುವ ಹಿನ್ನೆಲೆ ಪೋಷಕರಿಗೆ ಸಮಾನ ಪಾಲನೆ, ಜಂಟಿ ಹೊಣೆಗಾರಿಕೆಯನ್ನು ಅನುಷ್ಠಾನಗೊಳಿಸಬೇಕೆಂದು ಹಾಗೂ ಪೋಷಕರ ವಿಚ್ಛೇದನ ಪ್ರಕರಣಗಳಲ್ಲಿ ಸಿಲುಕಿರುವ ಮಕ್ಕಳ ಬಗ್ಗೆ ನ್ಯಾಯಾಲಯಗಳು ತಮ್ಮ ದೃಷ್ಟಿಕೋನ ಬದಲಿಸುವಂತೆ ‘ಸೇವ್ ಚೈಲ್ಡ್ ಇಂಡಿಯಾ ಫೌಂಡೇಷನ್’ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿ ಮನವಿ ಮಾಡಿದೆ

ಶನಿವಾರ ಸುದ್ದಿಗೋಷ್ಠಿಯಲ್ಲಿ ಪೌಂಡೇಷನ್ ಸದಸ್ಯ ಹಾಗೂ ನ್ಯಾಯವಾದಿ ಪ್ರದೀಪ್‌ಕುಮಾರ್ ಕೌಶಿಕ್ ಮಾತನಾಡಿ, ಅರ್ಜಿ ಪುರಸ್ಕರಿಸಿದ ಸುಪ್ರೀಂ ಕೋರ್ಟ್ ಮೆಚ್ಚುಗೆ ವ್ಯಕ್ತಪಡಿಸಿದ್ದು, ಕಳೆದ ಜುಲೈ 19ರಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಈ ರಿಟ್ ಅರ್ಜಿಯು ಒಂದು ‘ನೋಬಲ್ ಕಾಸ್ ಎಂದು ಹೇಳಿದ್ದು, ಜತೆಗೆ ಪ್ರತಿವಾದಿಗಳಿಗೆ ನೋಟಿಸ್ ನೀಡುವಂತೆ ತಿಳಿಸಿದೆ ಎಂದರು.

ದೇಶದಲ್ಲಿ ಶೇ, 16 ವಿಚ್ಚೇದನ ಪ್ರಕರಣಗಳಿದ್ದು ಅದರಲ್ಲಿ ಸಿಲುಕಿರುವ ಮಕ್ಕಳ ಅಳಲು ಸಮಾಜ ಹಾಗೂ ನ್ಯಾಯಾಲಯಗಳ ಗಮನಕ್ಕೆ ಬಂದಿಲ್ಲ.ಕೌಟುಂಬಿಕ ವಿವಾದದಿಂದ ತಂದೆ ಇಲ್ಲದೆ ತಾಯಿಯ ಜತೆಗಷ್ಟೇ ಮಕ್ಕಳು ಬೆಳೆಯುವುದರಿಂದ ಮಕ್ಕಳ ಬಾಲ್ಯ, ವಾತ್ಸಲ್ಯ, ಪಾಲನೆ ಕಸಿದುಕೊಂಡಂತಾಗುತ್ತದೆ.ಅದಕ್ಕಾಗಿ ಮಕ್ಕಳ ಬೆಳವಣಿಗೆ, ಪೋಷಣೆಯಲ್ಲಿ ಪೋಷಕರು ಸಮಾನ ಪಾತ್ರವಹಿಸುವಂತೆ ಸೂಚಿಸಬೇಕು ಎಂದು ಅರ್ಜಿಯಲ್ಲಿ ಸೂಚಿಸಲಾಗಿದೆ.

ವಿವಾಹದ ವಿವಾದದಲ್ಲಿ ಮಗುವನ್ನು ಒಬ್ಬರಿಗೆ ಸೀಮಿತವಾಗಿಸಬಾರದು ಇದಕ್ಕಾಗಿಪೋಷಕರ ನಡುವೆ ಪಾಲನೆ ಬಗೆಗೆ ಒಪ್ಪಂದವಾಗಬೇಕು.ಇದಕ್ಕೆ ಸುಪ್ರೀಂ ನಿಂದ ಸಕಾರಾತ್ಮಕ ಸ್ಪಂದನೆ ಇದೆ ಎಂದು ಹೇಳಿದ ಅವರು ಸಮಾಜದಲ್ಲಿ ಈ ಸಂಬಂಧ ಜಾಗೃತಿ ಮೂಡುವ ಅಗತ್ಯವನ್ನು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT