ಅಮಿತ್ ಶಾರಿಂದ ಗೌರವ ನಮನ 
ದೇಶ

ಬಿಜೆಪಿ ಕೇಂದ್ರ ಕಚೇರಿಗೆ ಆಗಮಿಸಿದ ಅರುಣ್ ಜೇಟ್ಲಿ ಕಳೇಬರ; ಅಮಿತ್ ಶಾ ಅಂತಿಮ ನಮನ, ಅಪರಾಹ್ನ ಅಂತ್ಯಕ್ರಿಯೆ  

ಕೇಂದ್ರದ ಮಾಜಿ ವಿತ್ತ ಮಂತ್ರಿ, ಹಿರಿಯ ಬಿಜೆಪಿ ನಾಯಕ ಅರುಣ್ ಜೇಟ್ಲಿಯವರ ಮೃತದೇಹವನ್ನು ಭಾನುವಾರ ಬೆಳಗ್ಗೆ ಬಿಜೆಪಿ ಕೇಂದ್ರ ಕಚೇರಿಗೆ ತರಲಾಯಿತು. 

ನವದೆಹಲಿ: ಕೇಂದ್ರದ ಮಾಜಿ ವಿತ್ತ ಮಂತ್ರಿ, ಹಿರಿಯ ಬಿಜೆಪಿ ನಾಯಕ ಅರುಣ್ ಜೇಟ್ಲಿಯವರ ಮೃತದೇಹವನ್ನು ಭಾನುವಾರ ಬೆಳಗ್ಗೆ ಬಿಜೆಪಿ ಕೇಂದ್ರ ಕಚೇರಿಗೆ ಕರೆತರಲಾಯಿತು. ಅಲ್ಲಿ ಜೇಟ್ಲಿ ಅವರ ಅನುಯಾಯಿಗಳು ಮತ್ತು ಅಭಿಮಾನಿಗಳು ತಮ್ಮ ಅಗಲಿದ ನಾಯಕನಿಗೆ ಅಂತಿಮ ದರ್ಶನ ನೀಡಿ ಗೌರವ ನಮನ ಸಲ್ಲಿಸಿದರು.


ಅರುಣ್ ಜೇಟ್ಲಿಯವರು ನಿನ್ನೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಜೇಟ್ಲಿಯವರ ಕಳೇಬರವನ್ನು ಕೈಲಾಶ್ ಕಾಲೊನಿ ನಿವಾಸದಿಂದ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಬಿಜೆಪಿ ಕಚೇರಿಗೆ ಕರೆತರಲಾಯಿತು. ಇಂದು ಮಧ್ಯಾಹ್ನದವರೆಗೆ ಬಿಜೆಪಿ ಕಚೇರಿಯ ಪತ್ರಿಕಾಗೋಷ್ಠಿ ಕೊಠಡಿಯಲ್ಲಿ ಇರಿಸಲಾಗುತ್ತಿದ್ದು ಅಲ್ಲಿಗೆ ಕೇಂದ್ರ ಸಚಿವ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೋಗಿ ಅಂತಿಮ ನಮನ ಸಲ್ಲಿಸಿದ್ದಾರೆ. 


ಬಿಜೆಪಿ ಕಚೇರಿಯಲ್ಲಿ ಈಗ ಜೇಟ್ಲಿಯವರ ಪುತ್ರ, ಪತ್ನಿ ಹಾಗೂ ಸಂಬಂಧಿಕರು ಇದ್ದಾರೆ. ಇಂದು ಅಪರಾಹ್ನ 2.30ರ ಸುಮಾರಿಗೆ ಯಮುನಾ ನದಿ ತೀರದಲ್ಲಿರುವ ನಿಗಂಬೋದ್ ಘಾಟ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಜೇಟ್ಲಿಯವರ ಅಂತ್ಯಕ್ರಿಯೆ ನೆರವೇರಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT