ನವದೆಹಲಿ: ಬಿಜೆಪಿ ಹಿರಿಯ ಮುಖಂಡ ಅರುಣ್ ಜೇಟ್ಲಿ ಅವರ ನಿಧನದಿಂದ ತೆರವಾಗಿರುವ ರಾಜ್ಯಸಭಾ ಸದಸ್ಯತ್ವವನ್ನು ಅವರ ಪತ್ನಿ ಸಂಗೀತಾ ಜೇಟ್ಲಿ ಅಥವಾ ಅವರ ಪುತ್ರ ಅರುಣ್ ಜೇಟ್ಲಿಗೆ ನೀಡಲು ಬಿಜೆಪಿ ಚಿಂತನೆ ನಡೆಸಿದೆ.
ಪ್ರಧಾನಿ ನರೇಂದ್ರ ಮೋದಿ ನಾಳೆ ದೆಹಲಿಗೆ ವಾಪಸ್ಸಾದ ನಂತರ ಈ ಸಂಬಂಧ ಬಿಜೆಪಿ ವರಿಷ್ಠರು ಚರ್ಚೆ ನಡೆಸಲಿದ್ದು, ಈ ವಾರಾಂತ್ಯದೊಳಗೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಕಳೆದ ವರ್ಷ ಏಪ್ರಿಲ್ ತಿಂಗಳಲ್ಲಿ ಗುಜರಾತಿನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅರುಣ್ ಜೇಟ್ಲಿ ಅವರ ಸದಸ್ಯತ್ವ ಅವಧಿ ಮಾರ್ಚ್ 2024ಕ್ಕೆ ಅಂತ್ಯಗೊಳ್ಳಲಿದೆ.
ಚುನಾವಣಾ ಆಯೋಗ ಮುಂದಿನ ತಿಂಗಳು ಚುನಾವಣಾ ದಿನಾಂಕವನ್ನು ನಿಗದಿಪಡಿಸುವ ಸಾಧ್ಯತೆ ಇದೆ.