ದೇಶ

ಸುಷ್ಮಾ, ಜೇಟ್ಲಿ ಸಾವಿಗೆ ವಿರೋಧ ಪಕ್ಷಗಳ ಮಾಟ ಮಂತ್ರ ಕಾರಣ: ಸಾಧ್ವಿ ಪ್ರಗ್ಯಾ 

Vishwanath S

ನವದೆಹಲಿ: ಕೇಂದ್ರ ಮಾಜಿ ಸಚಿವರಾದ ಸುಷ್ಮಾ ಸ್ವರಾಜ್ ಮತ್ತು ಅರುಣ್ ಜೇಟ್ಲಿ ಅವರು ಸಾವಿಗೆ ವಿರೋಧ ಪಕ್ಷಗಳ ಮಾಟ ಮಂತ್ರ ಕಾರಣ ಎಂದು ಭೋಪಾಲ್ ಸಂಸದೆ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕಳೆದ ಒಂದು ತಿಂಗಳಲ್ಲೇ ಬಿಜೆಪಿಯ ಇಬ್ಬರು ಮಹಾನ್ ನಾಯಕರ ಸಾವು ಸಂಭವಿಸಿದೆ. ಇದಕ್ಕೆಲ್ಲಾ ವಿಪಕ್ಷಗಳ ಮಾಟ ಮಂತ್ರ ಕಾರಣ. ಬಿಜೆಪಿ ವಿರುದ್ಧ ವಿಪಕ್ಷಗಳು ದುಷ್ಟ ಶಕ್ತಿಗಳ ಬಳಕೆ ಮಾಡುತ್ತಿದೆ ಎಂದು ಆರೋಪಿಸಿದರು.

ಒಂದು ಸಲ ಮಹಾರಾಜ್ ಜಿ  ನನಗೆ ನಿಮ್ಮ ಕೆಟ್ಟ ದಿನಗಳು ಶುರುವಾದವು. ವಿರೋಧಪಕ್ಷಗಳು ಬಿಜೆಪಿ ಮೇಲೆ ದುಷ್ಟ ಶಕ್ತಿಯ ಪ್ರಯೋಗ ಮಾಡಲಿವೆ ಎಂದಿದ್ದರು. ಆದರೆ ಅದಕ್ಕೆ ನಾನು ಹೆಚ್ಚು ತಲೆ ಕೆಡಿಸಿಕೊಂಡಿರಲಿಲ್ಲ. ಆದರೆ ಈಗ ನಮ್ಮ ಪಕ್ಷದ ಮಹಾನ್ ನಾಯಕರಿಬ್ಬರು ಸಾವನ್ನಪ್ಪಿದ ಮೇಲೆ ಅದರ ಬಗ್ಗೆ ನಾನು ಯೋಚಿಸಬೇಕಾಗಿದೆ ಎಂದರು.

SCROLL FOR NEXT