ಸಾರ್ವಜನಿಕವಾಗಿ ಮಹತ್ವದ ಘೋಷಣೆಗಳು ಬೇಡ: ಸಚಿವರಿಗೆ ಪ್ರಧಾನಿ 
ದೇಶ

ಸಾರ್ವಜನಿಕವಾಗಿ ಮಹತ್ವದ ಘೋಷಣೆಗಳು ಬೇಡ: ಸಚಿವರಿಗೆ ಪ್ರಧಾನಿ 

ಕಾಶ್ಮೀರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಮಹತ್ವದ ಘೋಷಣೆಗಳನ್ನು ಮಾಡುವುದು ಬೇಡ ಎಂದು ಸಂಪುಟ ಸಹೋದ್ಯೋಗಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ. 

ನವದೆಹಲಿ: ಕಾಶ್ಮೀರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಮಹತ್ವದ ಘೋಷಣೆಗಳನ್ನು ಮಾಡುವುದು ಬೇಡ ಎಂದು ಸಂಪುಟ ಸಹೋದ್ಯೋಗಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ. 

ಈಡೇರಿಸಲು ಸಾಧ್ಯವಿಲ್ಲದ ಭರವಸೆಗಳನ್ನು, ತಮ್ಮ ವ್ಯಾಪ್ತಿಗೆ ಬಾರದ ವಿಷಯಗಳ ಬಗ್ಗೆ ಭರವಸೆಗಳನ್ನು ನೀಡಬಾರದು ಎಂದು ಮೋದಿ ಹೇಳಿದ್ದಾರೆ. 

ಸಚಿವರು ಇತ್ತೀಚಿನ ದಿನಗಳಲ್ಲಿ ಕಾಶ್ಮೀರಕ್ಕೆ ಸಂಬಂಧಿಸಿದಂತೆ ತಮ್ಮ ವ್ಯಾಪ್ತಿಗೆ ಬಾರದ ವಿಷಯಗಳ ಬಗ್ಗೆ ಹೇಳಿಕೆ ನೀಡುತ್ತಿರುವುದರ ಬಗ್ಗೆ ಪ್ರಧಾನಿ ಅಸಮಾಧಾನ ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆಯೂ ಸಹ ಪ್ರಧಾನಿ ನರೇಂದ್ರ ಮೋದಿ ಸಚಿವರ ವಿವಾದಾತ್ಮಕ, ಸುದ್ದಿಗೆ ಗ್ರಾಸವಾಗುವ ಹೇಳಿಕೆಗಳ ಬಗ್ಗೆಯೂ ಪ್ರಧಾನಿ ಅಸಮಾಧಾನ ವ್ಯಕ್ತಪಡಿಸಿದ್ದರು. 

ಆರ್ಟಿಕಲ್ 370 ರದ್ದುಗೊಂಡಿರುವುದು ಪ್ರತಿಯೊಂದು ಸಚಿವಾಲಯಕ್ಕೂ ಸಂಬಂಧಪಟ್ಟ ವಿಷಯ, ಅಧಿಕಾರಿಗಳ ಮೂಲಕ ಸಚಿವರುಗಳು ಕಣಿವೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಬೇಕು ಆರ್ಟಿಕಲ್ 370 ರದ್ದತಿ ಹೇಗೆ ಬದಲಾವಣೆ ತರಲಿದೆ ಎಂಬುದನ್ನು ಜನತೆಗೆ ಮನವರಿಕೆ ಮಾಡಬೇಕು ಎಂದು ಪ್ರಧಾನಿ ಮೋದಿ ಸಚಿವರುಗಳಿಗೆ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT