ಸಂಗ್ರಹ ಚಿತ್ರ 
ದೇಶ

33 ಯುದ್ಧ ವಿಮಾನಗಳ ಖರೀದಿಗೆ ಮುಂದಾದ ಭಾರತೀಯ ವಾಯುಸೇನೆ!

ಫ್ರಾನ್ಸ್ ನಿರ್ಮಿತ ಅತ್ಯಾಧುನಿಕ ಯುದ್ಧ ವಿಮಾನ ರಫಲ್ ಯುದ್ಧ ವಿಮಾನ ಭಾರತೀಯ ವಾಯುಸೇನೆಯ ಬತ್ತಳಿಕೆ ಸೇರಲು ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಮತ್ತೆ 63 ಯುದ್ಧ ವಿಮಾನಗಳ ಖರೀದಿಗೆ ಭಾರತೀಯ ವಾಯು ಸೇನೆ ಮುಂದಾಗಿದೆ ಎಂದು ತಿಳಿದುಬಂದಿದೆ.

ರಷ್ಯಾ ನಿರ್ಮಿತ 21 ಮಿಗ್ 29 ಯುದ್ಧ ವಿಮಾನ, 12 ಸುಖೋಯ್ 30 ಫೈಟರ್ ಜೆಟ್ ಗಳ ಖರೀದಿಗೆ ಗಂಭೀರ ಚಿಂತನೆ

ನವದೆಹಲಿ: ಫ್ರಾನ್ಸ್ ನಿರ್ಮಿತ ಅತ್ಯಾಧುನಿಕ ಯುದ್ಧ ವಿಮಾನ ರಫಲ್ ಯುದ್ಧ ವಿಮಾನ ಭಾರತೀಯ ವಾಯುಸೇನೆಯ ಬತ್ತಳಿಕೆ ಸೇರಲು ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಮತ್ತೆ 63 ಯುದ್ಧ ವಿಮಾನಗಳ ಖರೀದಿಗೆ ಭಾರತೀಯ ವಾಯು ಸೇನೆ ಮುಂದಾಗಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಭಾರತೀಯ ವಾಯುಸೇನೆಗೆ ಮತ್ತಷ್ಟು ಬಲ ತುಂಬಲು ಕೇಂದ್ರ ಸರ್ಕಾರ 63 ಯುದ್ಧ ವಿಮಾನಗಳ ಖರೀದಿಗೆ ಅನುಮೋದನೆ ನೀಡಿದೆ ಎನ್ನಲಾಗಿದೆ. ಅದರಂತೆ ಭಾರತೀಯ ವಾಯುಸೇನೆ ರಷ್ಯಾ ನಿರ್ಮಿತ 21 ಮಿಗ್ 29 ಮತ್ತು 12 ಸುಖೋಯ್ ಫೈಟರ್ ಜೆಟ್ ಗಳ ಖರೀದಿಗೆ ಗಂಭೀರ ಚಿಂತನೆಯಲ್ಲಿ ತೊಡಗಿದೆ. ಇದಕ್ಕಾಗಿ ಮುಂದಿನವಾರ ಐಎಎಫ್ ಅಧಿಕಾರಿಗಳು ಮಹತ್ವಸಭೆ ಕರೆದಿದ್ದು, ಸಭೆಯಲ್ಲಿ ಈ ಕುರಿತಂತೆ ಚರ್ಚೆ ನಡೆಸಲಿದ್ದಾರೆ. 

ಕಳೆದ ಹಲವು ವರ್ಷಗಳಿಂದ ದೇಶದ ವಿವಿಧ ಭಾಗಗಳಲ್ಲಿ ವಿವಿಧ ಸಂದರ್ಭದಲ್ಲಿ 12 ಸುಖೋಯ್ 30 ಫೈಟರ್ ಜೆಟ್ ಗಳು ಪತನವಾಗಿದ್ದವು. ಇವುಗಳಿಗೆ ಪರ್ಯಾಯವಾಗಿ 12 ಸುಖೋಯ್ 30 ವಿಮಾನಗಳನ್ನು ಖರೀದಿಸಲಾಗುತ್ತಿದೆ. ಆ ಮೂಲಕ ಭಾರತೀಯ ಸೇನೆಯಲ್ಲಿರುವ ಸುಖೋಯ್ 30 ಎಂಕೆಐ ವಿಮಾನಗಳ ಸಂಖ್ಯೆ ಮತ್ತೆ  272ಕ್ಕೆ ಏರಿಕೆಯಾಗಲಿದೆ. ಪ್ರಸ್ತುತ ಸನ್ನಿವೇಶದಲ್ಲಿ ಭಾರತಕ್ಕೆ ಇಷ್ಟು ಪ್ರಮಾಣದ ಸುಖೋಯ್ 30 ವಿಮಾನಗಳ ಅನಿವಾರ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಅಂತೆಯೇ 29 ಮಿಗ್ 29 ಯುದ್ಧ ವಿಮಾನದ ಖರೀದಿ ಕುರಿತು ಮಾತನಾಡಿದ ಅವರು, ಹೊಸ ತಂತ್ರಜ್ಞಾನ ಮಿಗ್ 29 ಯುದ್ಧ ವಿಮಾನಗಳು ಭಾರತೀಯ ವಾಯುಸೇನೆಯ ಬಲ ಹೆಚ್ಚಿಸಲಿವೆ. ಈಗಾಗಲೇ ಈ ಶ್ರೇಣಿಯ ಯುದ್ಧ ವಿಮಾನಗಳು ಸೇನೆಯ ಬತ್ತಳಿಕೆಯಲ್ಲಿ ಇವೆಯಾದರೂ, ನೂತನ ವಿಮಾನಗಳೂ ಇನ್ನೂ ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿವೆ. ನೂತನ ಮಿಗ್ 29 ಯುದ್ಧ ವಿಮಾನಗಳ ಖರೀದಿ ಕುರಿತಂತೆ ಚರ್ಚೆ ಚಾಲ್ತಿಯಲ್ದಿದ್ದು ಶೀಘ್ರದಲ್ಲೇ ಈ ಕುರಿತು ಅಂತಿಮ ನಿರ್ಣಯಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?