ಕಾಶ್ಮೀರದಲ್ಲಿ ನಿಲ್ಲದ ಉಗ್ರರ ಅಟ್ಟಹಾಸ: ಅಂಗಡಿ ತೆರೆದಿದ್ದಕ್ಕೆ 65 ವರ್ಷದ ವೃದ್ಧನ ಹತ್ಯೆ! 
ದೇಶ

ಕಾಶ್ಮೀರದಲ್ಲಿ ನಿಲ್ಲದ ಉಗ್ರರ ಅಟ್ಟಹಾಸ: ಅಂಗಡಿ ತೆರೆದಿದ್ದಕ್ಕೆ 65 ವರ್ಷದ ವೃದ್ಧನ ಹತ್ಯೆ! 

ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ನಂತರ ಉಗ್ರರ ದಾಳಿ ನಡೆದಿದ್ದು, ಶ್ರೀನಗರದಲ್ಲಿ 65 ವರ್ಷದ ವೃದ್ಧನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. 

ಶ್ರೀನಗರ: ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ನಂತರ ಉಗ್ರರ ದಾಳಿ ನಡೆದಿದ್ದು, ಶ್ರೀನಗರದಲ್ಲಿ 65 ವರ್ಷದ ವೃದ್ಧನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. 

ಉಗ್ರರ ಗುಂಡೇಟಿಗೆ ಗುರಿಯಾದ ವೃದ್ಧ ವ್ಯಕ್ತಿಯನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಬದುಕಿ ಉಳಿಯಲಿಲ್ಲ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ. 

ಶ್ರೀನಗರದ ಹೊರಭಾಗದಲ್ಲಿರುವ ಪರಿಂಪೋರದಲ್ಲಿ ವೃದ್ಧ ವ್ಯಕ್ತಿಯೊಬ್ಬರು ಅಂಗಡಿಯನ್ನು ತೆರೆದಿದ್ದರು, ಇದೇ ಕಾರಣಕ್ಕಾಗಿ ಉಗ್ರರು ಆತನ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.  ಇದಕ್ಕೂ ಮುನ್ನ ಅನಂತ್ ನಾಗ್ ಜಿಲ್ಲೆಯಲ್ಲಿ ಟ್ರಕ್ ಡ್ರೈವರ್ ನ್ನು ಗುರಿಯಾಗಿರಿಸಿಕೊಂಡು ಕಲ್ಲು ಹೊಡೆದು ಹತ್ಯೆ ಮಾಡಲಾಗಿತ್ತು. ಈಗ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಕಾಶ್ಮೀರಕ್ಕೆ ಪರಿಸ್ಥಿತಿ ಪರಿಶೀಲನೆಗೆ ತೆರಳುತ್ತಿರುವುದಕ್ಕೂ ಮುನ್ನ ಓರ್ವ ನಾಗರಿಕನನ್ನು ಹತ್ಯೆ ಮಾಡಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT