ಸಂಗ್ರಹ ಚಿತ್ರ 
ದೇಶ

ಭೀಕರ ದೃಶ್ಯ: ಸಾಯುವ ಮುನ್ನ ಬಿಯರ್ ಬಾಟಲ್‌ನಲ್ಲಿ ತನ್ನ ರಕ್ತ ತುಂಬಿ ಕೊನೆಯ ಗಿಫ್ಟ್ ಕೊಟ್ಟ ಪಾಗಲ್ ಪ್ರೇಮಿ!

ಪ್ರಿಯೆ ನೀನಿಲ್ಲದೆ ನಾನು ಬದುಕಲಾರೆ ಎಂದು ಪಾಗಲ್ ಪ್ರೇಮಿಯೊಬ್ಬ ತನ್ನ ಕೈ ಮಣಿಕಟ್ಟನ್ನು ಕತ್ತರಿಸಿಕೊಂಡು ಬಿಯರ್ ಬಾಟಲ್ ನಲ್ಲಿ ತನ್ನ ರಕ್ತವನ್ನು ತುಂಬಿ ಅದನ್ನು ತನ್ನ ಪ್ರಿಯತಮೆಗೆ ತಲುಪಿಸಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಚೆನ್ನೈ: ಪ್ರಿಯೆ ನೀನಿಲ್ಲದೆ ನಾನು ಬದುಕಲಾರೆ ಎಂದು ಪಾಗಲ್ ಪ್ರೇಮಿಯೊಬ್ಬ ತನ್ನ ಕೈ ಮಣಿಕಟ್ಟನ್ನು ಕತ್ತರಿಸಿಕೊಂಡು ಬಿಯರ್ ಬಾಟಲ್ ನಲ್ಲಿ ತನ್ನ ರಕ್ತವನ್ನು ತುಂಬಿ ಅದನ್ನು ತನ್ನ ಪ್ರಿಯತಮೆಗೆ ತಲುಪಿಸಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಚೆನ್ನೈನಲ್ಲಿ ಈ ಘಟನೆ ನಡೆದಿದ್ದು ಮಂಗಳವಾರ ರಾತ್ರಿ ತನ್ನ ಸ್ನೇಹಿತನ ಜೊತೆ ಬಾರ್ ಗೆ ತೆರಳಿದ್ದ ಪಾಗಲ್ ಪ್ರೇಮಿಯೊಬ್ಬ. ತಾನು ಪ್ರೀತಿಸುತ್ತಿರುವ ಹುಡುಗಿ ತನ್ನ ಮೊಬೈಲ್ ಕರೆಗಳನ್ನು ಸ್ವೀಕರಿಸುತ್ತಿಲ್ಲ. ಅಲ್ಲದೆ ಸಾಮಾಜಿಕ ಜಾಲತಾಣದಲ್ಲೂ ತನ್ನನ್ನು ಬ್ಲಾಕ್ ಮಾಡಿರುವುದಾಗಿ ಹೇಳಿಕೊಂಡಿದ್ದಾನೆ. 

ನಾನು ಎಷ್ಟೇ ಪ್ರಯತ್ನ ಪಟ್ಟರು ಆಕೆಯನ್ನು ಭೇಟಿಯಾಗಲು ಸಾಧ್ಯವಾಗುತ್ತಿಲ್ಲ ಎಂದು ರೋದಿಸಿದ್ದಾನೆ. ನಂತರ ಅಲ್ಲಿದ್ದ ಬಿಯರ್ ಬಾಟಲ್ ಅನ್ನು ಹೊಡೆದು ಅದರಿಂದ ತನ್ನ ಮಣಿಕಟ್ಟನ್ನು ಕತ್ತರಿಸಿಕೊಂಡು ಅದನ್ನು ಖಾಲಿಯಿದ್ದ ಬಿಯರ್ ಬಾಟಲ್ ಗೆ ತುಂಬಿದ್ದಾನೆ. ಈ ವೇಳೆ ಆತನನ್ನು ತಡೆಯಲು ಪ್ರಯತ್ನಿಸಿದಾಗ ಆತ ಒಡೆದ ಬಿಯರ್ ಬಾಟಲ್ ಅನ್ನು ತನ್ನ ಕುತ್ತಿಗೆಯ ಹತ್ತಿರ ಹಿಡಿದು ತನ್ನನ್ನು ತಡೆಯಲು ಬಂದರೆ ನಾನು ಕತ್ತನ್ನು ಕತ್ತರಿಸಿಕೊಳ್ಳುತ್ತೇನೆ ಎಂದು ಹೆದರಿಸಿದ್ದಾನೆ. ಬಾಟಲ್ ತುಂಬಿದ ನಂತರ ಅದನ್ನು ತನ್ನ ಪ್ರೇಯಸಿಗೆ ನೀಡುವಂತೆ ತಿಳಿಸಿದ್ದಾನೆ. 

ದೇಹದಲ್ಲಿ ರಕ್ತ ಕಡಿಮೆಯಾಗುತ್ತಿದ್ದಂತೆ ಪಾಗಲ್ ಪ್ರೇಮಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದು ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT