ರಾಸಾಯನಿಕ ಕಾರ್ಖಾನೆಯಲ್ಲಿ ಸಿಲೆಂಡರ್ ಸ್ಪೋಟ,10 ಕಾರ್ಮಿಕರು ಸಾವು,40 ಜನರಿಗೆ ಗಾಯ 
ದೇಶ

ರಾಸಾಯನಿಕ ಕಾರ್ಖಾನೆಯಲ್ಲಿ ಸಿಲೆಂಡರ್ ಸ್ಪೋಟ,10 ಕಾರ್ಮಿಕರು ಸಾವು,40 ಜನರಿಗೆ ಗಾಯ

ಮಹಾರಾಷ್ಟ್ರದ  ಧುಲೆ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಕನಿಷ್ಟ 10  ಮಂದಿ ಸಾವನ್ನಪ್ಪಿ 40 ಮಂದಿ ಗಾಯಗೊಂಡಿರುವ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.

ಮುಂಬೈ: ಮಹಾರಾಷ್ಟ್ರದ  ಧುಲೆ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಕನಿಷ್ಟ 10  ಮಂದಿ ಸಾವನ್ನಪ್ಪಿ 40 ಮಂದಿ ಗಾಯಗೊಂಡಿರುವ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.

ಬೆಳಿಗ್ಗೆ 9.45 ರ ಸುಮಾರಿಗೆ ಈ ಘಟನೆ ಸಂಭವಿಸಿದಾಗ ಶಿರ್ಪುರ ತಾಲೂಕಿನ ಘಾಡಿ ಗ್ರಾಮದಲ್ಲಿರುವ ಕಾರ್ಖಾನೆಯೊಳಗೆ ಕನಿಷ್ಠ 100 ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರೆಂದು ಪೋಲೀಸರು ತಿಳಿಸಿದ್ದಾರೆ.

ಫ್ಲೆಮಾ ಫೇಸಿ ಕಾರ್ಕಾನೆಯಲ್ಲಿ ಹಲವು ಸಿಲೆಂಡರ್ ಗಳು ಸ್ಪೋಟಗೊಂಡಿದ್ದು . ಈವರೆಗೆ ಕನಿಷ್ಠ ಎಂಟು ಶವಗಳನ್ನು ಪೊಲೀಸ್ ಮತ್ತು ರಕ್ಷಣಾ ತಂಡಗಳು ವಶಪಡಿಸಿಕೊಂಡಿವೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಶಿರ್ಪುರ ಪೊಲೀಸ್ ಠಾಣೆ ಅಧಿಕಾರಿ ತಿಳಿಸಿದ್ದಾರೆ.

ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದ್ದು ಪೊಲೀಸ್, ವಿಪತ್ತು ನಿರ್ವಹಣೆ, ಅಗ್ನಿಶಾಮಕ ದಳದ ವಿವಿಧ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT