ಪ್ರಿಯಾಂಕಾ ಗಾಂಧಿ 
ದೇಶ

ಹೈದರಾಬಾದ್, ಉ.ಪ್ರದೇಶ ಅತ್ಯಾಚಾರ, ಕೊಲೆ ಸಾಕಷ್ಟು ಬೇಸರ ತಂದಿದೆ: ಪ್ರಿಯಾಂಕಾ

ಹೈದರಾಬಾದ್ ಹಾಗೂ ಉತ್ತರಪ್ರದೇಶ ಅತ್ಯಾಚಾರ, ಕೊಲೆ ಪ್ರಕರಣಗಳು ಸಾಕಷ್ಟು ಬೇಸರವನ್ನು ತಂದಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರು ಹೇಳಿದ್ದಾರೆ. 

ನವದೆಹಲಿ: ಹೈದರಾಬಾದ್ ಹಾಗೂ ಉತ್ತರಪ್ರದೇಶ ಅತ್ಯಾಚಾರ, ಕೊಲೆ ಪ್ರಕರಣಗಳು ಸಾಕಷ್ಟು ಬೇಸರವನ್ನು ತಂದಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರು ಹೇಳಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್'ನಲ್ಲಿ ಟ್ವೀಟ್ ಮಾಡಿರುವ ಅವರು, ಅತ್ಯಾಚಾರ, ಕೊಲೆಯಂತಹ ಘಟನೆಗಳು ನಡೆದಾಗ ಸಮಾಜ ಮಾತನಾಡುವುದಕ್ಕಿಂತಲೂ ಹೆಚ್ಚು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದ್ದಾರೆ. 

ಹೈದರಬಾದ್ ನ ಪಶುವೈದ್ಯ ಮೇಲಿನ ಅತ್ಯಾಚಾರ, ಕೊಲೆ ಹಾಗೂ ಉತ್ತರಪ್ರದೇಶದ ಸಂಭಾಲ್ ನಲ್ಲಿರುವ ಅಪ್ರಾಪ್ತೆ ಮೇಲಿನ ಅತ್ಯಾಚಾರ ಸಾಕಷ್ಟು ಬೇಸರವನ್ನು ತರಿಸಿದೆ. ಅತ್ಯಾಚಾರ ಪ್ರಕರಣ ಕುರಿತು ನನ್ನಲ್ಲಿರುವ ಆಕ್ರೋಶವನ್ನು ಪದಗಳಲ್ಲಿ ಹೇಳಲು ಸಾಧ್ಯವಾಗುತ್ತಿಲ್ಲ. ಸಮಾಜದಲ್ಲಿರುವ ನಾವು ಮಾತನಾಡುವುದಕ್ಕಿಂತಲೂ ಇಂತಹ ಘಟನೆಗಳು ನಡೆದಾಗ ಹೆಚ್ಚೆಚ್ಚು ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಲಿಸಿ್ದದಾರೆ. 

ಕೆಲ ದಿನಗಳ ಹಿಂದಷ್ಟೇ ಕಾಮುಕರು ಹೈದರಾಬಾದ್ ನಲ್ಲಿ ಅಟ್ಟಹಾಸ ಮರೆದಿದ್ದರು. ವೈದ್ಯಕೀಯ ಪರೀಕ್ಷೆ ಬಳಿಕ ಗಚಿಬೌಲಿಗೆ ಬಂದಿದ್ದ ಪಶುವೈದ್ಯೆ ಮೇಲೆ ಕಾಮುಕರು ಮುಗಿಬಿದ್ದಿದ್ದರು. ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಬಳಿಕ ಆಕೆಯನ್ನು ಹತ್ಯೆಗೈದು ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದರು. ಇದರಂತೆ ಉತ್ತರಪ್ರದೇಶದಲ್ಲಿಯೂ ಇಂತಹದ್ದೇ ಘಟನೆ ನಡೆದಿತ್ತು. 16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ವೆಸಗಿ ಬೆಂಕಿ ಹಚ್ಚಿ ಸುಟ್ಟಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT