ಸುಪ್ರೀಂ ಕೋರ್ಟ್, ಅಯೋಧ್ಯೆ 
ದೇಶ

ಅಯೋಧ್ಯೆ ತೀರ್ಪು: ಸುಪ್ರೀಂಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ ಜಮಿಯತ್- ಉಲಮಾ-ಇ- ಹಿಂದ್

ಅಯೋಧ್ಯೆಯ ರಾಮಜನ್ಮಭೂಮಿ–ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ನ ಸಾಂವಿಧಾನಿಕ ಪೀಠ ನೀಡಿದ ತೀರ್ಪು ಮರು ಪರಿಶೀಲಿಸುವಂತೆ ಕೋರಿ ಜಮಿಯತ್- ಉಲಮಾ-ಇ- ಹಿಂದ್ ಸೋಮವಾರ ಅರ್ಜಿ ಸಲ್ಲಿಸಿದೆ.

ನವದೆಹಲಿ: ಅಯೋಧ್ಯೆಯ ರಾಮಜನ್ಮಭೂಮಿ–ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ನ ಸಾಂವಿಧಾನಿಕ ಪೀಠ ನೀಡಿದ ತೀರ್ಪು ಮರು ಪರಿಶೀಲಿಸುವಂತೆ ಕೋರಿ ಜಮಿಯತ್- ಉಲಮಾ-ಇ- ಹಿಂದ್ ಸೋಮವಾರ ಅರ್ಜಿ ಸಲ್ಲಿಸಿದೆ.

ಡಿಸೆಂಬರ್ 9ರಂದು ವಿವಾದಿತ ಭೂಮಿ ರಾಮಮಂದಿರಕ್ಕೆ, ಮಸೀದಿಗೆ ಪರ್ಯಾಯ ಜಮೀನು ನೀಡಿ ಸಂವಿಧಾನಿಕ ಪೀಠ ನೀಡಿದ್ದ ತೀರ್ಪು ಪ್ರಶ್ನಿಸಿ ಇಂದು 217 ಪುಟಗಳ ಮರು ಪರಿಶೀಲನಾ ಅರ್ಜಿ ಸಲ್ಲಿಸಲಾಗಿದೆ.

ಅಯೋಧ್ಯೆ ಪ್ರಕರಣದ ಬಗ್ಗೆ ಸೂಕ್ಷ್ಮವಾಗಿ ಯೋಚನೆ ಮಾಡಿದ್ದೇವೆ ಹಾಗೂ ಅರ್ಥ ಮಾಡಿಕೊಂಡಿದ್ದೇವೆ. ದೇಶದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಂಡಿದ್ದೇವೆ. ಸುಪ್ರೀಂಕೋರ್ಟ್ ನೀಡಿದ ತೀರ್ಪಿನಲ್ಲಿ ಮುಸ್ಲಿಂ ಸಮುದಾಯಕ್ಕೆ ನ್ಯಾಯ ಸಿಕ್ಕಿಲ್ಲ. ಹೀಗಾಗಿ ಮೇಲ್ಮನವಿ ಸಲ್ಲಿಸಿದ್ದೇವೆ ಎಂದು ಜಮಿಯತ್-ಉಲಮಾ-ಇ- ಹಿಂದ್ ಪರ ವಕೀಲರೊಬ್ಬರು ಹೇಳಿದ್ದಾರೆ.

ಸುಪ್ರೀಂಕೋರ್ಟ್ ಬಾಬ್ರಿ ಮಸೀದಿಯ ನಾಶಕ್ಕೆ ಅವಕಾಶ ನೀಡಿದೆ. ಮುಸ್ಲಿಮರಿಗೆ 5 ಎಕರೆ ಜಾಗವನ್ನು ನೀಡುವ ನಿಟ್ಟಿನಲ್ಲಿ ಸಂವಿಧಾನದ 142 ವಿಧಿಯನ್ನು ತಪ್ಪಾಗಿ ಬಳಸಲಾಗಿದೆ. ಹೀಗೆ ಅನೇಕ ವಿಚಾರವಾಗಿ ಒಟ್ಟು 217 ಪುಟಗಳ ಮೇಲ್ಮನವಿ ಸಲ್ಲಿಸಿದ್ದೇವೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT