ಸಂಗ್ರಹ ಚಿತ್ರ 
ದೇಶ

'ಹತ್ಯಾಚಾರ'; ಸಮಯ ವಿಳಂಬ ಮಾಡದೇ ಗಲ್ಲಿಗೇರಿಸಬೇಕು: ಪ್ರಧಾನಿಗೆ ಕೆಟಿಆರ್ ಮನವಿ

ಮಹಿಳೆಯರ ಮೇಲೆ ಅತ್ಯಾಚಾರ ಗೈದು ಕೊಲೆ ಮಾಡುವವರನ್ನು ವಿಳಂಬ ಮಾಡದೇ ಗಲ್ಲಿಗೇರಿಸುವ ಕಾನೂನು ತರಬೇಕು ಎಂದು ತೆಲಂಗಾಣ ಮಾಹಿತಿ ತಂತ್ರಜ್ಞಾನ ಮತ್ತು ಕೈಗಾರಿಕಾ ಸಚಿವ ಸಚಿವ ಕೆಟಿ ರಾಮಾರಾವ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ಹೈದರಾಬಾದ್: ಮಹಿಳೆಯರ ಮೇಲೆ ಅತ್ಯಾಚಾರ ಗೈದು ಕೊಲೆ ಮಾಡುವವರನ್ನು ವಿಳಂಬ ಮಾಡದೇ ಗಲ್ಲಿಗೇರಿಸುವ ಕಾನೂನು ತರಬೇಕು ಎಂದು ತೆಲಂಗಾಣ ಮಾಹಿತಿ ತಂತ್ರಜ್ಞಾನ ಮತ್ತು ಕೈಗಾರಿಕಾ ಸಚಿವ ಸಚಿವ ಕೆಟಿ ರಾಮಾರಾವ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ಇತ್ತೀಚೆಗೆ ಹೈದರಾಬಾದ್ ನಲ್ಲಿ ನಡೆದ ಪಶುವೈದ್ಯೆ ಪ್ರಿಯಾಂಕಾರೆಡ್ಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರವೊಂದನ್ನು ಬರೆದಿರುವ ಕೆಟಿಆರ್, ದೇಶಾದ್ಯಂತ ಭಾರೀ ಆಕ್ರೋಶ ಮತ್ತು ಪ್ರತಿಭಟನೆಗಳಿಗೆ ಕಾರಣವಾಗಿರುವ ಶಂಶಾಬಾದ್‌ನ 26 ವರ್ಷದ ಮಹಿಳಾ ಪಶುವೈದ್ಯರ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಘಟನೆಯ ಹಿನ್ನೆಲೆಯಲ್ಲಿ ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಅಪರಾಧ ದಂಡ ಸಂಹಿತೆ (ಸಿಆರ್‌ಪಿಸಿ) ಗೆ ತಿದ್ದುಪಡಿ ತರುವಂತೆ ಮನವಿ ಮಾಡಿದ್ದಾರೆ.

ಅಲ್ಲದೆ ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, 'ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುವ ಇಂತಹ ಘೋರ ಕೃತ್ಯಗಳನ್ನು ನಡೆಸುವವರಿಗೆ ವಿಳಂಬ ಮಾಡದೆ 'ಮರಣದಂಡನೆ' ಶಿಕ್ಷೆ ವಿಧಿಸಬೇಕು. ಮರುಪರಿಶೀಲನೆ ಅರ್ಜಿ ಸಲ್ಲಿಸಲು ಅವರಿಗೆ ಬೇರೆ ಯಾವ ಆಯ್ಕೆಗಳೂ ಇರಬಾರದು ಎಂದು ತಮ್ಮ ಪತ್ರದಲ್ಲಿ ಮನವಿ ಮಾಡಿದ್ದಾರೆ.  ಅಪರಾಧಿಗಳನ್ನು ಬಂಧಿಸಿರಬಹದು. ಆದರೆ, ಪ್ರಿಯಾಂಕಾ ರೆಡ್ಡಿಯವರ ಕುಟುಂಬಕ್ಕೆ ನ್ಯಾಯ ತಂದು ಕೊಡುವವರು ಯಾರು?  ಮಹಿಳೆ ಮತ್ತು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವವರನ್ನು ಸಮಯ ವಿಳಂಬ ಮಾಡದೇ ಗಲ್ಲಿಗೇರಿಸಲು ಕಾನೂನು ಬರಬೇಕು ಕೆಟಿಆರ್ ಆಗ್ರಹಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT