ಸಂಗ್ರಹ ಚಿತ್ರ 
ದೇಶ

ಹತ್ಯಾಚಾರ: 'ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ಥಳಿಸಬೇಕು': ವಿವಾದಕ್ಕೀಡಾದ ಜಯಾ ಬಚ್ಚನ್ ಹೇಳಿಕೆ!

ಹೈದರಾಬಾದ್ ವಶುವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದೇಶಾದ್ಯಂತ ಪ್ರತಿಧ್ವನಿಸಿದ್ದು, ಈ ಕುರಿತಂತೆ ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ನೀಡಿರುವ ಹೇಳಿಕೆ ಇದೀಗ ವಿವಾದಕ್ಕೀಡಾಗಿದೆ.

ನವದೆಹಲಿ: ಹೈದರಾಬಾದ್ ವಶುವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದೇಶಾದ್ಯಂತ ಪ್ರತಿಧ್ವನಿಸಿದ್ದು, ಈ ಕುರಿತಂತೆ ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ನೀಡಿರುವ ಹೇಳಿಕೆ ಇದೀಗ ವಿವಾದಕ್ಕೀಡಾಗಿದೆ.

ಮಹಿಳೆಯರ ಮೇಲಿನ ಅಪರಾಧ ಘಟನೆಗಳು ಹೆಚ್ಚಾಗುತ್ತಿರುವ ವಿಚಾರದ ಬಗ್ಗೆ ನಡೆದ ಚರ್ಚೆಯೊಂದರಲ್ಲಿ ಮಾತನಾಡುತ್ತಿದ್ದ ಜಯಾ ಬಚ್ಚನ್, ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ತಂದು ನಿಲ್ಲಿಸಿ ಥಳಿಸಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಅವರ ಈ ಹೇಳಿಕೆ ಇದೀಗ ವ್ಯಾಪಕ ವಿವಾದಕ್ಕೆ ಕಾರಣವಾಗಿದ್ದು, ಒಬ್ಬ ಜವಾಬ್ದಾರಿಯುತ ಸಂಸದೆಯಾಗಿ ಜಯಾ ಬಚ್ಚನ್ ಅವರು ಹಿಂಸಾತ್ಮಕ ಮಾರ್ಗಕ್ಕೆ ಕರೆ ಕೊಟ್ಟಿರುವುದಕ್ಕೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೈದರಾಬಾದ್​ನಲ್ಲಿ ಕಳೆದ ವಾರ 26 ವರ್ಷದ ಪಶುವೈದ್ಯೆಯೊಬ್ಬರ ಮೇಲೆ ನಾಲ್ಕು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿ ಭೀಕರವಾಗಿ ಕೊಲೆಗೈದಿದ್ದರು. ಮಹಿಳೆಯ ಟಯರ್ ಪಂಕ್ಚರ್ ಆದಾಗ ಸಹಾಯ ಮಾಡುವ ನೆಪದಲ್ಲಿ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದರು. ಈ ಘಟನೆ ಸಂಬಂಧ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT