ಸಂಗ್ರಹ ಚಿತ್ರ 
ದೇಶ

ಜಮ್ಮು ಕಾಶ್ಮೀರ: ಕುಪ್ವಾರಾದಲ್ಲಿ ಭೀಕರ ಹಿಮಪಾತ, ಓರ್ವ ಯೋಧ ಸಾವು, ಮೂವರು ನಾಪತ್ತೆ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ತಂಗ್ಧರ್ ಪ್ರದೇಶದಲ್ಲಿ ಹಿಮಪಾತವಾಗಿದ್ದು  ಸೇನೆಯ ಪೋಸ್ಟ್ ನಲ್ಲಿದ್ದ ಓರ್ವ ಯೋಧ ಸಾವನ್ನಪ್ಪಿದ್ದರೆ ಮೂವರು ನಾಪತ್ತೆಯಾಗಿದ್ದಾರೆ ಎಂದು ಸೇನಾಮೂಲಗಳು ಹೇಳಿದೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ತಂಗ್ಧರ್ ಪ್ರದೇಶದಲ್ಲಿ ಹಿಮಪಾತವಾಗಿದ್ದು  ಸೇನೆಯ ಪೋಸ್ಟ್ ನಲ್ಲಿದ್ದ ಓರ್ವ ಯೋಧ ಸಾವನ್ನಪ್ಪಿದ್ದರೆ ಮೂವರು ನಾಪತ್ತೆಯಾಗಿದ್ದಾರೆ ಎಂದು ಸೇನಾಮೂಲಗಳು ಹೇಳಿದೆ.

ಘಟನೆ ಬಳಿಕ ಕಾಣೆಯಾದ ಯೋಧರನ್ನು ಹುಡುಕಲು ಸೇನೆಯು ಶೋಧ ಮತ್ತು ಪಾರುಗಾಣಿಕಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.. ಈ ವೇಳೆ ಓರ್ವ ಸಿಬ್ಬಂದಿಯನು ಯಶಸ್ವಿಯಾಗಿ ರಕ್ಷಿಸಿದೆ.

ಇತ್ತೀಚಿನ ಮಾಹಿತಿಯ ಪ್ರಕಾರ, ಕುಪ್ವಾರಾದಲ್ಲಿ ಹಿಮದ ಕೆಳಗೆ ಸಿಕ್ಕಿಬಿದ್ದ ಕಾಣೆಯಾದ ಸೇನಾ ಯೋಧರ ಪತ್ತೆಗಾಗಿ ಪಾರುಗಾಣಿಕಾ ತಂಡ ಪ್ರಯತ್ನಿಸುತ್ತಿದೆ, ಆದಾಗ್ಯೂ, ಕಠಿಣ ಹವಾಮಾನ ಪರಿಸ್ಥಿತಿಗಳು ರಕ್ಷಣಾ ಕಾರ್ಯಾಚರಣೆಯನ್ನು ಕಷ್ಟಕರವಾಗಿಸಿದೆ.

ಈ ಮೊದಲು ನವೆಂಬರ್ 18 ರಂದು ಸಿಯಾಚಿನ್ ಹಿಮನದಿಯಲ್ಲಿ ಸುಮಾರು 18,000 ಅಡಿ ಎತ್ತರದಲ್ಲಿ ನಡೆದ ಘಟನೆಯಲ್ಲಿ, ನಾಲ್ಕು ಭಾರತೀಯ ಸೈನಿಕರು ಸಾವನ್ನಪ್ಪಿದ್ದರೆ, ಹಲವಾರು ಮಂದಿ ಗಾಯಗೊಂಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT