ಭದ್ರತಾ ಪಡೆ 
ದೇಶ

ಜಮ್ಮು-ಕಾಶ್ಮೀರದಿಂದ ಸೇನಾ ಪಡೆ ಹಿಂಪಡೆಯಲು ಕೇಂದ್ರ ಸರ್ಕಾರ ಗ್ನೀನ್ ಸಿಗ್ನಲ್ 

ಸಂವಿಧಾನದ 370ನೇ ಕಲಂ ರದ್ಧತಿಗೂ ಮುನ್ನಾ ಜುಲೈ ಕೊನೆಯ ವಾರದಿಂದ ಕಣಿವೆ ರಾಜ್ಯ ಜಮ್ಮು- ಕಾಶ್ಮೀರದಲ್ಲಿ ಭದ್ರತೆಗಾಗಿ ನಿಯೋಜಿಸಲಾಗಿರುವ ಹೆಚ್ಚುವರಿ ಸೇನಾ ಪಡೆಯನ್ನು ಹಿಂಪಡೆಯಲು ಕೇಂದ್ರ ಸರ್ಕಾರ ಮಂಗಳವಾರ ಗ್ರೀನ್ ಸಿಗ್ನಲ್ ನೀಡಿದೆ.

ಶ್ರೀನಗರ: ಸಂವಿಧಾನದ 370ನೇ ಕಲಂ ರದ್ಧತಿಗೂ ಮುನ್ನಾ ಜುಲೈ ಕೊನೆಯ ವಾರದಿಂದ ಕಣಿವೆ ರಾಜ್ಯ ಜಮ್ಮು- ಕಾಶ್ಮೀರದಲ್ಲಿ ಭದ್ರತೆಗಾಗಿ ನಿಯೋಜಿಸಲಾಗಿರುವ ಹೆಚ್ಚುವರಿ ಸೇನಾ ಪಡೆಯನ್ನು ಹಿಂಪಡೆಯಲು ಕೇಂದ್ರ ಸರ್ಕಾರ ಮಂಗಳವಾರ ಗ್ರೀನ್ ಸಿಗ್ನಲ್ ನೀಡಿದೆ.

ಕಣಿವೆ ರಾಜ್ಯದಲ್ಲಿ ಪರಿಸ್ಥಿತಿ ಸುಧಾರಿಸಿರುವುದನ್ನು ಗಮನಿಸಿ ಹೆಚ್ಚುವರಿ ಸೇನೆಯನ್ನು ಹಿಂಪಡೆಯುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹಿರಿಯ ಭದ್ರತಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾರಾಮುಲಾ, ಬಂಡಿಪೊರಾ ಮತ್ತಿತರ ಪ್ರದೇಶಗಳಲ್ಲಿ ನಿಯೋಜಿಸಲಾಗಿದ್ದ ಅರಸೇನಾ ಪಡೆಯ 300  ತುಕಡಿಯಲ್ಲಿ 20 ಮಂದಿ ಈಗಾಗಲೇ  ಕಣಿವೆ ರಾಜ್ಯ ತೊರೆದಿದ್ದಾರೆ. ಹಂತ ಹಂತವಾಗಿ ಸೇನೆಯನ್ನು ಹಿಂಪಡೆಯಲಾಗುವುದು.  ಆದರೆ, ಪೂರ್ಣ ಪ್ರಮಾಣದ ಸೇನೆಯ ಹಿಂತೆಗೆತಕ್ಕೆ ಯಾವುದೇ ಸಮಯದ ಮಿತಿಯಿಲ್ಲ . ಆದಾಗ್ಯೂ,  ಪರಿಸ್ಥಿತಿಯನ್ನು ನೋಡಿಕೊಂಡು ಮತ್ತೆ ನಿಯೋಜಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಪೊಂಚ್ ವಲಯವನ್ನು ಹೊರತುಪಡಿಸಿದಂತೆ ಜಮ್ಮು ವಲಯದಿಂದ ಬಹುತೇಕ ಅರಸೇನಾ ಪಡೆಯನ್ನು ಹಿಂತೆಗೆದುಕೊಳ್ಳಲಾಗಿದೆ. ಕೆಲ ಸೂಕ್ಷ್ಮ ಪ್ರದೇಶಗಳಲ್ಲಿ ಸೇನೆಯ ಭದ್ರತೆ ನೀಡಲಾಗಿದೆ. ಹೆಚ್ಚುವರಿ ಬಿಎಸ್ ಎಫ್ ಹಾಗೂ ಸಿಆರ್ ಪಿಎಫ್ ಯೋಧರನ್ನು ಹಿಂದಕ್ಕೆ ಕರೆಸಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸಂವಿಧಾನದ ಕಲಂ 370 ರದ್ಧತಿ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹಿನ್ನೆಲೆಯಲ್ಲಿ  ಹೆಚ್ಚುವರಿಯಾಗಿ 50 ಸಾವಿರದಿಂದ 70 ಸಾವಿರ ಅರೆಸೇನಾ ಪಡೆಯನ್ನು ನಿಯೋಜಿಸಿದ್ದರಿಂದ ಆಗಸ್ಟ್ ಮೂರರಂದು ಅಮರನಾಥ ಯಾತ್ರೆಯನ್ನು ರದ್ದುಪಡಿಸಲಾಗಿತ್ತು. 

ಪರಿಸ್ಥಿತಿಯನ್ನು ಗಮನಿಸಲಾಗುತ್ತಿದೆ. ಮರು ನಿಯೋಜನೆ ಕೂಡಾ ಪರಿಸ್ಥಿತಿಯೊಂದಿಗೆ ನೇರ ಸಂಬಂಧ ಹೊಂದಿದೆ.  ಒಂದು ವೇಳೆ ಹೆಚ್ಚುವರಿ ಸೇನಾ ಸಿಬ್ಬಂದಿ ಅವಶ್ಯಕತೆ ಇಲ್ಲ ಎಂದು ಅನಿಸಿದರೆ ಹೆಚ್ಚುವರಿ ಸೇನಾಪಡೆಯನ್ನು ಹಿಂದಕ್ಕೆ ಕರೆಸಿಕೊಳ್ಳಲಾಗುವುದು ಎಂದು ಸಿಆರ್ ಪಿಎಫ್ ವಕ್ತಾರರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT