ಭದ್ರತಾ ಪಡೆ 
ದೇಶ

ಜಮ್ಮು-ಕಾಶ್ಮೀರದಿಂದ ಸೇನಾ ಪಡೆ ಹಿಂಪಡೆಯಲು ಕೇಂದ್ರ ಸರ್ಕಾರ ಗ್ನೀನ್ ಸಿಗ್ನಲ್ 

ಸಂವಿಧಾನದ 370ನೇ ಕಲಂ ರದ್ಧತಿಗೂ ಮುನ್ನಾ ಜುಲೈ ಕೊನೆಯ ವಾರದಿಂದ ಕಣಿವೆ ರಾಜ್ಯ ಜಮ್ಮು- ಕಾಶ್ಮೀರದಲ್ಲಿ ಭದ್ರತೆಗಾಗಿ ನಿಯೋಜಿಸಲಾಗಿರುವ ಹೆಚ್ಚುವರಿ ಸೇನಾ ಪಡೆಯನ್ನು ಹಿಂಪಡೆಯಲು ಕೇಂದ್ರ ಸರ್ಕಾರ ಮಂಗಳವಾರ ಗ್ರೀನ್ ಸಿಗ್ನಲ್ ನೀಡಿದೆ.

ಶ್ರೀನಗರ: ಸಂವಿಧಾನದ 370ನೇ ಕಲಂ ರದ್ಧತಿಗೂ ಮುನ್ನಾ ಜುಲೈ ಕೊನೆಯ ವಾರದಿಂದ ಕಣಿವೆ ರಾಜ್ಯ ಜಮ್ಮು- ಕಾಶ್ಮೀರದಲ್ಲಿ ಭದ್ರತೆಗಾಗಿ ನಿಯೋಜಿಸಲಾಗಿರುವ ಹೆಚ್ಚುವರಿ ಸೇನಾ ಪಡೆಯನ್ನು ಹಿಂಪಡೆಯಲು ಕೇಂದ್ರ ಸರ್ಕಾರ ಮಂಗಳವಾರ ಗ್ರೀನ್ ಸಿಗ್ನಲ್ ನೀಡಿದೆ.

ಕಣಿವೆ ರಾಜ್ಯದಲ್ಲಿ ಪರಿಸ್ಥಿತಿ ಸುಧಾರಿಸಿರುವುದನ್ನು ಗಮನಿಸಿ ಹೆಚ್ಚುವರಿ ಸೇನೆಯನ್ನು ಹಿಂಪಡೆಯುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹಿರಿಯ ಭದ್ರತಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾರಾಮುಲಾ, ಬಂಡಿಪೊರಾ ಮತ್ತಿತರ ಪ್ರದೇಶಗಳಲ್ಲಿ ನಿಯೋಜಿಸಲಾಗಿದ್ದ ಅರಸೇನಾ ಪಡೆಯ 300  ತುಕಡಿಯಲ್ಲಿ 20 ಮಂದಿ ಈಗಾಗಲೇ  ಕಣಿವೆ ರಾಜ್ಯ ತೊರೆದಿದ್ದಾರೆ. ಹಂತ ಹಂತವಾಗಿ ಸೇನೆಯನ್ನು ಹಿಂಪಡೆಯಲಾಗುವುದು.  ಆದರೆ, ಪೂರ್ಣ ಪ್ರಮಾಣದ ಸೇನೆಯ ಹಿಂತೆಗೆತಕ್ಕೆ ಯಾವುದೇ ಸಮಯದ ಮಿತಿಯಿಲ್ಲ . ಆದಾಗ್ಯೂ,  ಪರಿಸ್ಥಿತಿಯನ್ನು ನೋಡಿಕೊಂಡು ಮತ್ತೆ ನಿಯೋಜಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಪೊಂಚ್ ವಲಯವನ್ನು ಹೊರತುಪಡಿಸಿದಂತೆ ಜಮ್ಮು ವಲಯದಿಂದ ಬಹುತೇಕ ಅರಸೇನಾ ಪಡೆಯನ್ನು ಹಿಂತೆಗೆದುಕೊಳ್ಳಲಾಗಿದೆ. ಕೆಲ ಸೂಕ್ಷ್ಮ ಪ್ರದೇಶಗಳಲ್ಲಿ ಸೇನೆಯ ಭದ್ರತೆ ನೀಡಲಾಗಿದೆ. ಹೆಚ್ಚುವರಿ ಬಿಎಸ್ ಎಫ್ ಹಾಗೂ ಸಿಆರ್ ಪಿಎಫ್ ಯೋಧರನ್ನು ಹಿಂದಕ್ಕೆ ಕರೆಸಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸಂವಿಧಾನದ ಕಲಂ 370 ರದ್ಧತಿ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹಿನ್ನೆಲೆಯಲ್ಲಿ  ಹೆಚ್ಚುವರಿಯಾಗಿ 50 ಸಾವಿರದಿಂದ 70 ಸಾವಿರ ಅರೆಸೇನಾ ಪಡೆಯನ್ನು ನಿಯೋಜಿಸಿದ್ದರಿಂದ ಆಗಸ್ಟ್ ಮೂರರಂದು ಅಮರನಾಥ ಯಾತ್ರೆಯನ್ನು ರದ್ದುಪಡಿಸಲಾಗಿತ್ತು. 

ಪರಿಸ್ಥಿತಿಯನ್ನು ಗಮನಿಸಲಾಗುತ್ತಿದೆ. ಮರು ನಿಯೋಜನೆ ಕೂಡಾ ಪರಿಸ್ಥಿತಿಯೊಂದಿಗೆ ನೇರ ಸಂಬಂಧ ಹೊಂದಿದೆ.  ಒಂದು ವೇಳೆ ಹೆಚ್ಚುವರಿ ಸೇನಾ ಸಿಬ್ಬಂದಿ ಅವಶ್ಯಕತೆ ಇಲ್ಲ ಎಂದು ಅನಿಸಿದರೆ ಹೆಚ್ಚುವರಿ ಸೇನಾಪಡೆಯನ್ನು ಹಿಂದಕ್ಕೆ ಕರೆಸಿಕೊಳ್ಳಲಾಗುವುದು ಎಂದು ಸಿಆರ್ ಪಿಎಫ್ ವಕ್ತಾರರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT