ಚಿದಂಬರಂ 
ದೇಶ

ಐಎನ್ ಎಕ್ಸ್ ಮೀಡಿಯಾ ಕೇಸ್: 105 ದಿನಗಳ ನಂತರ ಪಿ.ಚಿದಂಬರಂ ಗೆ ಷರತ್ತುಬದ್ಧ ಜಾಮೀನು

ಐಎನ್‌ಎಕ್ಸ್ ಮೀಡಿಯಾ ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರಿಗೆ ಸುಪ್ರೀಂ ಕೋರ್ಟ್ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ.

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರಿಗೆ ಸುಪ್ರೀಂ ಕೋರ್ಟ್ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿ ಆರ್. ಭಾನುಮತಿ ನೇತೃತ್ವದ  ತ್ರಿಸದಸ್ಯ ಪೀಠ ಚಿದಂಬರಂ ಅವರಿಗೆ 105 ದಿನಗಳ ನಂತರ ಜಾಮೀನು ನೀಡಿದೆ, ಪಾಸ್ ಪೋರ್ಟ್ ಅನ್ನು ವಶಕ್ಕೆ ನೀಡುವಂತೆ ಸೂಚಿಸಿರುವ ಪೀಠ ಯಾರಿಗೂ ಸಂದರ್ಶನ, ಸಾರ್ವಜನಿಕ ಹೇಳಿಕೆ ನೀಡಬಾರದು ಎಂದು ಸೂಚಿಸಿದೆ.

ನವೆಂಬರ್ 15ರಂದು ಚಿದಂಬರಂ ಅರ್ಜಿ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್​ ಜಾಮೀನು ನಿರಾಕರಿಸಿತ್ತು. ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಚಿದಂಬರಂ ಪ್ರಮುಖ ಪಾತ್ರವಹಿಸಿದ್ದು, ಅವರಿಗೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿತ್ತು. ಇಂದು ಜಾಮೀನು ಅರ್ಜಿಯ ಅಂತಿಮ ತೀರ್ಪು ಹೊರಬಿದ್ದಿದೆ.

ಕಳೆದ ಆಗಸ್ಟ್ 21 ರಂದು ಸಿಬಿಐ ಚಿದಂಬರಂ ಅವರನ್ನು ಬಂಧಿಸಿತ್ತು,  ಚಿದಂಬರಮ್ ಅವರು 2007ರಲ್ಲಿ ಕೇಂದ್ರ ಹಣಕಾಸು ಸಚಿವರಾಗಿದ್ದಾಗ ಐಎನ್​ಎಕ್ಸ್ ಮೀಡಿಯಾ ಸಂಸ್ಥೆಗೆ 305 ಕೋಟಿ ರೂ ಮೊತ್ತದಷ್ಟು ವಿದೇಶೀ ಬಂಡವಾಳ ಹೂಡಿಕೆಗೆ ವಿದೇಶ ಬಂಡವಾಳ ಹೂಡಿಕೆ ಪ್ರೋತ್ಸಾಹಕ ಮಂಡಳಿ (ಎಫ್​ಐಪಿಬಿ)ಯ ಅನುಮೋದನೆ ಸಿಕ್ಕಿತ್ತು. ಮಗನ ಶಿಫಾರಸಿನ ಮೇಲೆ ಈ ಅನುಮೋದನೆಯನ್ನು ಚಿದಂಬರಂ ದೊರಕಿಸಿಕೊಟ್ಟಿದ್ದರೆಂಬ ಆರೋಪವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT