ಸಂಗ್ರಹ ಚಿತ್ರ 
ದೇಶ

ಶಬರಿಮಲೆಯಲ್ಲಿ ಮೊಬೈಲ್ ನಿಷೇಧ; ತಿರುವಾಂಕೂರು ದೇವಸ್ವಂ ಮಂಡಳಿ

ಅಯ್ಯಪ್ಪ ಸ್ವಾಮಿಯ ಪವಿತ್ರ ಯಾತ್ರಾ ಸ್ಥಳ ಶಬರಿಮಲೆಯಲ್ಲಿ ಇನ್ನು ಮುಂದೆ ಮೊಬೈಲ್ ಬಳಕೆ ಮೇಲೆ ಕಠಿಣ ನಿಷೇಧ ಹೇರಲಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಘೋಷಣೆ ಮಾಡಿದೆ.

ಕೊಚ್ಚಿನ್: ಅಯ್ಯಪ್ಪ ಸ್ವಾಮಿಯ ಪವಿತ್ರ ಯಾತ್ರಾ ಸ್ಥಳ ಶಬರಿಮಲೆಯಲ್ಲಿ ಇನ್ನು ಮುಂದೆ ಮೊಬೈಲ್ ಬಳಕೆ ಮೇಲೆ ಕಠಿಣ ನಿಷೇಧ ಹೇರಲಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಘೋಷಣೆ ಮಾಡಿದೆ.

ಈ ಹಿಂದೆಯೇ ಶಬರಿಮಲೆ ಆವರಣದಲ್ಲಿ ಮೊಬೈಲ್ ಬಳಕೆ ಮೇಲೆ ನಿಷೇಧ ಹೇರಲಾಗಿತ್ತಾದರೂ ಅದರ ಪರಿಣಾಮಕಾರಿ ಜಾರಿ ಸಾಧ್ಯವಾಗಿರಲಿಲ್ಲ. ಇದೀಗ ಈ ಬಗ್ಗೆ ನಿರ್ಧಾರ ಕೈಗೊಂಡಿರುವ ತಿರುವಾಂಕೂರು ದೇವಸ್ವಂ ಮಂಡಳಿ ಶಬರಿಮಲೆ ದೇಗುಲದ ಅವರಣದಲ್ಲಿ ಮೊಬೈಲ್ ಬಳಕೆ ಮೇಲೆ ನಿಷೇಧ ಹೇರಿದೆ.

ಇತ್ತೀಚಿನ ದಿನಗಳಲ್ಲಿ ದೇಗುಲದ ಆವರಣದಲ್ಲಿ ಮೊಬೈಲ್ ಬಳಕೆ ಹೆಚ್ಚಾಗಿದ್ದು, ಎಷ್ಟೇ ನಿಯಂತ್ರಿಸಿದರೂ ಭಕ್ತರು ಅಯ್ಯಪ್ಪ ಸ್ವಾಮಿ ವಿಗ್ರಹದ ಮುಂದೆ ನಿಂತು ಫೋಟೋ ಮತ್ತು ಸೆಲ್ಫಿಕ್ಲಿಕ್ಕಿಸಿಕೊಳ್ಳುತ್ತಿರುತ್ತಾರೆ. ಇದರಿಂದ ಇತರೆ ಭಕ್ತರಿಗೆ ತೊಂದರೆಯಾಗುತ್ತಿದ್ದು, ಇದೇ ಕಾರಣಕ್ಕೆ ದೇವಾಲಯದ ಆವರಣದಲ್ಲಿ ಮೊಬೈಲ್ ಬಳಕೆ ಬೇಡ ಎಂದು ಈ ಹಿಂದೆ ದೇವಸ್ವ ಮಂಡಳಿ ಭಕ್ತರಿಗೆ ಮನವಿ ಮಾಡಿತ್ತು.

ಇದರ ಹೊರತಾಗಿಯೂ ಮೊಬೈಲ್ ಬಳಕೆ ನಿಷೇಧಕ್ಕಾಗಿ ದೇವಸ್ವಂ ಮಂಡಳಿ ಓಂಬುಡ್ಸ್ ಮನ್ ಕೂಡ ಜಾರಿಗೆ ತರಲಾಗಿತ್ತು. ನ್ಯಾಯಮೂರ್ತಿ ಪಿಆರ್ ರಾಮನ್ ನೇತೃತ್ವದ ಓಂಬುಡ್ಸ್ ಮನ್ ತಂಡ ಮೊಬೈಲ್ ಬಳಕೆಯನ್ನು ನಿಯಂತ್ರಿಸುವುದರ ಕುರಿತು ತನ್ನ ವರದಿ ನೀಡಿತ್ತು. ಅಲ್ಲದೆ ಈ ಬಗ್ಗೆ ಕೇರಳ ಹೈಕೋರ್ಟ್ ದೇಗುಲದ ಆಡಳಿತ ಮಾಹಿತಿ ನೀಡಿದ್ದು, ದೇವಾಲಯದ ಆವರಣದಲ್ಲಿ ಯಾವುದೇ ಕಾರಣಕ್ಕೂ ಮೊಬೈಲ್ ಬಳಕೆ, ಫೋಟೋ ತೆಗೆಯುವುದನ್ನು ನಿಷೇಧಿಸಲಾಗಿದೆ ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT