ರವೀಶ್ ಕುಮಾರ್ 
ದೇಶ

ಸುಡಾನ್ ದುರಂತ: ಆರು ಭಾರತೀಯರ ಮೃತ ದೇಹ ತರಲು ಪ್ರಯತ್ನ-ರವೀಶ್ ಕುಮಾರ್ 

ಸುಡಾನ್ ಕಾರ್ಖಾನೆ ಸ್ಪೋಟದಲ್ಲಿ ಮೃತಪಟ್ಟ ಆರು ಭಾರತೀಯರ ಮೃತ ದೇಹ ಭಾರತಕ್ಕೆ ತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ  ತಿಳಿಸಿದೆ.

ನವದೆಹಲಿ: ಸುಡಾನ್ ಕಾರ್ಖಾನೆ ಸ್ಪೋಟದಲ್ಲಿ ಮೃತಪಟ್ಟ ಆರು ಭಾರತೀಯರ ಮೃತ ದೇಹ ಭಾರತಕ್ಕೆ ತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ  ತಿಳಿಸಿದೆ.

ವಾರದ ಮಾಹಿತಿ ನೀಡುವ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವಾಲಯದ ವಕ್ತಾರ ರವೀಶ್ ಕುಮಾರ್, ಸುಡಾನ್ ನ ಈ ಕಾರ್ಖಾನೆಯಲ್ಲಿ 58 ಭಾರತೀಯರು ಕೆಲಸ ಮಾಡುತ್ತಿದ್ದು ದುರ್ಘಟನೆಯಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ಎಂಟು ಭಾರತೀಯರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 11 ಜನರ ಗುರುತು ಪತ್ತೆಯಾಗಿಲ್ಲ ಎಂದರು, 33 ಭಾರತೀಯರು ಸುರಕ್ಷಿತವಾಗಿದ್ದಾರೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

ಮೃತರ ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ. ಸ್ಥಳೀಯ ಸರ್ಕಾರದೊಂದಿಗೆ ನಮ್ಮ ಭಾರತೀಯ ರಾಯಭಾರಿ ಅಧಿಕಾರಿಗಳು ಸಹಕರಿಸುತ್ತಿದ್ದಾರೆ. ರಾಯಭಾರಿ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದು, ಆರು ಭಾರತೀಯರ ಮೃತ ದೇಹಗಳನ್ನು ಭಾರತಕ್ಕೆ ತರಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಇದಕ್ಕೂ ಮುನ್ನ 18 ಭಾರತೀಯರು ಸೇರಿದಂತೆ ಒಟ್ಟಾರೇ 23 ಮಂದಿ  ಕಾರ್ಖಾನೆಯಲ್ಲಿ ಸ್ಪೋಟದಲ್ಲಿ ಮೃತಪಟ್ಟಿರುವುದಾಗಿ ಸುಡಾನ್ ನಲ್ಲಿರುವ ಭಾರತೀಯ ರಾಯಬಾರಿ ಅಧಿಕಾರಿಗಳು ಹೇಳಿಕೆ ನೀಡಿದ್ದರು. ಆದಾಗ್ಯೂ, ಮೃತಪಟ್ಟವರ ಬಗ್ಗೆ  ಅಧಿಕೃತವಾಗಿ ದೃಢಪಡಿಸಿರಲಿಲ್ಲ. ಸೂಡಾನ್  ಅವಘಡ ಬಗ್ಗೆ ಪ್ರಧಾನಿ ನರೇಂದ್ರ ಮೋದಿ  ತೀವ್ರ ಸಂತಾಪ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT