ನಿತ್ಯಾನಂದ 
ದೇಶ

ನಿತ್ಯಾನಂದ  ಪತ್ತೆಗೆ ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸಲು ಗುಜರಾತ್  ಪೊಲೀಸರ ಮನವಿ 

ತಲೆಮರೆಸಿಕೊಂಡಿರುವ  ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಸ್ವಾಮೀಜಿ ಪತ್ತೆಗೆ ‘ಬ್ಲೂ ಕಾರ್ನರ್‌ ನೋಟಿಸ್‌’ ಜಾರಿಗೊಳಿಸಲು ಗುಜರಾತ್‌ ರಾಜ್ಯ ಪೊಲೀಸರು ಈಗ ಇಂಟರ್‌ಪೋಲ್‌ಗೆ ಮನವಿ ಮಾಡಲಿದ್ದಾರೆ.

ಅಹಮದಾಬಾದ್: ತಲೆಮರೆಸಿಕೊಂಡಿರುವ  ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಸ್ವಾಮೀಜಿ ಪತ್ತೆಗೆ ‘ಬ್ಲೂ ಕಾರ್ನರ್‌ ನೋಟಿಸ್‌’ ಜಾರಿಗೊಳಿಸಲು ಗುಜರಾತ್‌ ರಾಜ್ಯ ಪೊಲೀಸರು ಈಗ ಇಂಟರ್‌ಪೋಲ್‌ಗೆ ಮನವಿ ಮಾಡಲಿದ್ದಾರೆ.

ಅಹಮದಾಬಾದ್‌ನ ಗ್ರಾಮೀಣ ಠಾಣೆ ಪೊಲೀಸರು ಈ ಕುರಿತು ರಾಜ್ಯದ ಅಪರಾಧ ತನಿಖಾ ದಳಕ್ಕೆ (ಸಿಐಡಿ) ಪತ್ರ ಬರೆದಿದ್ದಾರೆ. ನಿತ್ಯಾನಂದ ವಿರುದ್ಧದ ಅಪಹರಣ ಮತ್ತು ಕಾನೂನುಬಾಹಿರವಾಗಿ ಇರಿಸಿಕೊಂಡ ಆರೋಪ ಕುರಿತು ಸಿಐಡಿ ತನಿಖೆ ನಡೆಸುತ್ತಿದೆ.  

ತಲೆಮರೆಸಿಕೊಂಡಿರುವ ನಿತ್ಯಾನಂದನ ಪತ್ತೆಗೆ ಇದು ಅಗತ್ಯ ಎಂದು ಪತ್ರದಲ್ಲಿ ಕೋರಲಾಗಿದೆ ಎಂದು ಅಧಿಕಾರಿ ತಿಳಿಸಿದರು.

ಸದಸ್ಯ ರಾಷ್ಟ್ರಗಳ ನಡುವೆ ಅಪರಾಧಿಗಳ ಮಾಹಿತಿ ವಿನಿಮಯ ಮಾಡಿಕೊಳ್ಳಲು ಬ್ಲೂ ಕಾರ್ನರ್‌ ನೋಟಿಸ್ ಕಡ್ಡಾಯವಾಗಿದೆ.

ಅಹಮದಾಬಾದ್ ನಲ್ಲಿರುವ ನಿತ್ಯಾನಂದ ಆಶ್ರಮದಿಂದ ಕಳೆದ ತಿಂಗಳು ಇಬ್ಬರು ಹೆಣ್ಣುಮಕ್ಕಳು ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿತ್ಯಾನಂದ ವಿರುದ್ಧ  ಎಫ್ ಐ ಆರ್ ದಾಖಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವಿಶ್ವಸಂಸ್ಥೆ ನಿರ್ಣಯಗಳ ಆಧಾರದ ಮೇಲೆ ಕಾಶ್ಮೀರ ಸಮಸ್ಯೆ ಪರಿಹರಿಸಬೇಕು: ಭಾರತದ ವಿರುದ್ಧ ಮತ್ತೆ ಕ್ಯಾತೆ ತೆಗೆದ ಟರ್ಕಿ ಅಧ್ಯಕ್ಷ..!

ಗಾಝಾ ಯುದ್ಧ ನಿಲ್ಲಿಸಿದ್ರೆ ಮಾತ್ರ ಟ್ರಂಪ್'ಗೆ ನೊಬೆಲ್ ಪ್ರಶಸ್ತಿ; ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್

"ನನ್ನನ್ನು ರಸ್ತೆಯಲ್ಲಿ ತಡೆದಿದ್ದಾರೆ": ಟ್ರಂಪ್‌ಗೇ ಮ್ಯಾಕ್ರನ್ ಫೋನ್ ಕಾಲ್, ನ್ಯೂಯಾರ್ಕ್‌ ಬೀದಿಯಲ್ಲಿ ಹೈಡ್ರಾಮಾ...!

ತೈವಾನ್‌ನಲ್ಲಿ ʻರಾಗಸʼ ಚಂಡಮಾರುತದ ಅಬ್ಬರ: 14 ಬಲಿ, 124 ಮಂದಿ ನಾಪತ್ತೆ

ಮೈಸೂರು: ಇಂದು ಮಹಿಷಾ ದಸರಾ ಆಚರಣೆ; ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ

SCROLL FOR NEXT